ಸಂಗ್ರಹ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಹಲವೆಡೆ ಹಿಮಪಾತ: ರಾಷ್ಟ್ರೀಯ ಹೆದ್ದಾರಿ ಬಂದ್

ಜವಾಹರ್ ಸುರಂಗ ಮಾರ್ಗದ ಸುತ್ತಮುತ್ತ ಹಾಗೂ ಜಮ್ಮು ಮತ್ತು ಕಾಶ್ಮೀರದ ಹಲವುವ ಭಾಗಗಳಿ ಭಾರೀ ಹಿಮ ಬೀಳುತ್ತಿರುವ ಹಿನ್ನಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರೆಯನ್ನು ಬುಧವಾರ ಬಂದ್ ಮಾಡಲಾಗಿದೆ...

ಶ್ರೀನಗರ: ಜವಾಹರ್ ಸುರಂಗ ಮಾರ್ಗದ ಸುತ್ತಮುತ್ತ ಹಾಗೂ ಜಮ್ಮು ಮತ್ತು ಕಾಶ್ಮೀರದ ಹಲವುವ ಭಾಗಗಳಿ ಭಾರೀ ಹಿಮ ಬೀಳುತ್ತಿರುವ ಹಿನ್ನಲೆಯಲ್ಲಿ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರೆಯನ್ನು ಬುಧವಾರ ಬಂದ್ ಮಾಡಲಾಗಿದೆ. 
ತೀವ್ರ ಹಿಮಪಾತವಾಗುತ್ತಿರುವ ಹಿನ್ನಲೆಯಲ್ಲಿ ರಂಬನ್ ಮತ್ತು ರಮ್ಸು ನಡುವಿನ ರಸ್ತೆ ಸಂಪರ್ಕ ಬಂದ್ ಆಗಿದೆ. 
ದಕ್ಷಿಣ ಕಾಶ್ಮೀರದ ಶೋಫಿಯನ್ ಜಿಲ್ಲೆಯ ಐತಿಹಾಸಿಕ ಮುಘಲ್ ರಸ್ತೆ, ಜಮ್ಮುವಿನ ರಜೌರಿ ಮತ್ತು ಪೂಂಚ್, ಶಿಮ್ಲಾದ ಸುತ್ತಮುತ್ತಲಿನ ಪ್ರದೇಶ ಕುಫ್ರಿ, ನರ್ಕಂಡ ಮತ್ತು ಖರ್ ಪತ್ಥರ್ ನಲ್ಲೂ ತೀವ್ರ ಹಿಮಪಾತವಾಗುತ್ತಿದೆ. ತಾಪಮಾನ ಕನಿಷ್ಟಕ್ಕೆ ಕುಸಿಯುವ ಸಾಧ್ಯತೆಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಜಮ್ಮು ಮತ್ತು ಕಾಶ್ಮೀರದ ಸುತ್ತಮುತ್ತಲಿನ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಮತ್ತಷ್ಟು ಹಿಮಪಾತವಾಗುವ ಸಾಧ್ಯತೆಗಳಿವೆ. ಈ ಹಿಮಪಾತ ಮಾರ್ಚ್ 13ರವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT