ದಲಜೀತ್ ಜೌಧರಿ - ಸೈಫುಲ್ಲಾ 
ದೇಶ

ಹತ್ಯೆಯಾದ ಸೈಫುಲ್ಲಾ ಸ್ವಯಂ ಘೋಷಿತ ಉಗ್ರ, ಐಎಸ್ಐಎಸ್ ನಂಟಿನ ಬಗ್ಗೆ ಸಾಕ್ಷ್ಯ ಇಲ್ಲ: ಪೊಲೀಸ್

ಲಖನೌನಲ್ಲಿ ಭಯೋತ್ಪಾದಕ ನಿಗ್ರಹ ಪಡೆ(ಎಟಿಎಸ್) ಗುಂಡೇಟಿಗೆ ಬಲಿಯಾದ ಶಂಕಿತ ಉಗ್ರ ಸೈಫುಲ್ಲಾ ಐಎಸ್ಐಎಸ್ ನೊಂದಿಗೆ ಸಂಪರ್ಕ....

ಲಖನೌ: ಲಖನೌನಲ್ಲಿ ಭಯೋತ್ಪಾದಕ ನಿಗ್ರಹ ಪಡೆ(ಎಟಿಎಸ್) ಗುಂಡೇಟಿಗೆ ಬಲಿಯಾದ ಶಂಕಿತ ಉಗ್ರ ಸೈಫುಲ್ಲಾ ಐಎಸ್ಐಎಸ್ ನೊಂದಿಗೆ ಸಂಪರ್ಕ ಹೊಂದಿರುವ ಬಗ್ಗೆ ಯಾವುದೇ ಸಾಕ್ಷ್ಯಗಳು ಲಭ್ಯವಾಗಿಲ್ಲ. ಆದರೆ ಆತ ಸ್ವಯಂ ಘೋಷಿಸಿ ಉಗ್ರನಾಗಿರುವ ಸಾಧ್ಯತೆ ಇದೆ ಎಂದು ಉತ್ತರ ಪ್ರದೇಶ ಪೊಲೀಸರು ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ(ಕಾನೂನು ಸುವ್ಯವಸ್ಥೆ) ದಲಜೀತ್ ಜೌಧರಿ ಅವರು, ಸೈಫುಲ್ಲಾ ಐಎಸ್ಐಎಸ್ ನೊಂದಿಗೆ ನಂಟು ಹೊಂದಿರುವ ಬಗ್ಗೆ ನಮಗೆ ಇದುವರೆಗೂ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ. ಆದರೆ ಆತನ ಮನೆಯಲ್ಲಿ ಉರ್ದು ಹಾಗೂ ಇಂಗ್ಲಿಷ್ ನಲ್ಲಿದ್ದ ಐಎಸ್ಐಎಸ್ ಕುರಿತ ಪುಸ್ತಕಗಳು ಸಿಕ್ಕಿವೆ ಎಂದು ಹೇಳಿದ್ದಾರೆ.
ಶಂಕಿತ ಉಗ್ರನ ಮನೆಯಿಂದ ಎಂಟು ಪಿಸ್ತೂಲ್, 650 ಮದ್ದು ಗುಂಡುಗಳು, 50 ಸ್ಫೋಟಕ ವಸ್ತುಗಳು ಹಾಗೂ ಬಾಂಬ್ ತಯಾರಿಸುವ ಸಾಧನಗಳು, ಲ್ಯಾಪ್ ಟಾಪ್, ಆಧಾರ್ ಕಾರ್ಡ್, ವಿದೇಶಿ ಕರೆನ್ಸಿ, ಪಾಸ್ ಪೋರ್ಟ್ ಹಾಗೂ ಸಿಮ್ ಕಾರ್ಡ್ ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಚೌಧರಿ ತಿಳಿಸಿದ್ದಾರೆ.
ಲಖನೌನ ಹೊರವಲಯದ ಠಾಕೂರ್ ಗಂಜ್ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಸೈಫುಲ್ಲಾನನ್ನು ನಿನ್ನೆ ಭಯೋತ್ಪಾದನಾ ನಿಗ್ರಹ ದಳ ಎನ್ ಕೌಂಟರ್ ಮಾಡಿತ್ತು. ಉಜ್ಜನಿ ರೈಲು ಸ್ಫೋಟ ಪ್ರಕರಣದ 9 ಮಂದಿ ಶಂಕಿತ ಉಗ್ರರ ಪೈಕಿ ಸೈಫುಲ್ಲಾ ಸಹ ಒಬ್ಬನಾಗಿದ್ದ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾಚಿಕೆಗೇಡಿನ ಸಂಗತಿ'; ಎಲ್ಲಾ ಪಕ್ಷಗಳ ದೊಡ್ಡ ಕುಳಗಳು 'ಅಕ್ರಮ ಮರಳು ಗಣಿಗಾರಿಕೆಯಲ್ಲಿ ಭಾಗಿ': ಪರಮೇಶ್ವರ್

MP: ಗಣರಾಜ್ಯೋತ್ಸವದಂದು ತಟ್ಟೆಗಳ ಬದಲಿಗೆ ಹಾಳೆಗಳ ಮೇಲೆ ಮಕ್ಕಳಿಗೆ ಉಪಹಾರ, ಶಿಕ್ಷಣ ವ್ಯವಸ್ಥೆಗೆ ನಾಚಿಕೆಗೇಡು!

U19 ವಿಶ್ವಕಪ್: ಜಿಂಬಾಬ್ವೆ ತಂಡವನ್ನು 204 ರನ್ ಗಳಿಂದ ಮಣಿಸಿದ ಭಾರತ; ಸೂಪರ್ ಸಿಕ್ಸ್‌ನಲ್ಲಿ ನಂಬರ್ 1 ಸ್ಥಾನ!

ಉಡುಪಿ: ದೋಣಿ ಮುಳುಗಿ ಮೂವರು ಪ್ರವಾಸಿಗರು ಸಾವು; ಜಿಲ್ಲಾಡಳಿತದಿಂದ ಸುರಕ್ಷತಾ ಕ್ರಮ

FTA ಗೆ ಸಹಿ ಬೆನ್ನಲ್ಲೇ ಮಹತ್ವದ ಘೋಷಣೆ: ಭಾರತದಲ್ಲಿ ಮೊದಲ ಲೀಗಲ್ ಗೇಟ್‌ವೇ ಕಚೇರಿ ತೆರೆಯಲಿರುವ EU

SCROLL FOR NEXT