ಸೈಫುಲ್ಲಾ 
ದೇಶ

ಶಂಕಿತ ಉಗ್ರ ಸೈಫುಲ್ಲಾ ಮೃತದೇಹ ಸ್ವೀಕರಿಸಲು ತಂದೆ ನಕಾರ

ಲಖನೌನಲ್ಲಿ ಭಯೋತ್ಪಾದಕ ನಿಗ್ರಹ ಪಡೆ(ಎಟಿಎಸ್) ಗುಂಡೇಟಿಗೆ ಬಲಿಯಾದ ಶಂಕಿತ ಭಯೋತ್ಪಾದಕ ಸೈಫುಲ್ಲಾ ಮೃತದೇಹವನ್ನು ಸ್ವೀಕರಿಸಲು ಆತನ ತಂದೆ ಸರ್ತಾಜ್...

ಲಖನೌ: ಲಖನೌನಲ್ಲಿ ಭಯೋತ್ಪಾದಕ ನಿಗ್ರಹ ಪಡೆ(ಎಟಿಎಸ್) ಗುಂಡೇಟಿಗೆ ಬಲಿಯಾದ ಶಂಕಿತ ಭಯೋತ್ಪಾದಕ ಸೈಫುಲ್ಲಾ ಮೃತದೇಹವನ್ನು ಸ್ವೀಕರಿಸಲು ಆತನ ತಂದೆ ಸರ್ತಾಜ್ ನಿರಾಕರಿಸಿದ್ದಾರೆ. 
ಭಯೋತ್ಪಾದಕ ನನ್ನ ಮಗನಾಗಲು ಸಾಧ್ಯವಿಲ್ಲ. ನಮ್ಮ ಪೂರ್ವಜರು ಹುಟ್ಟಿದ್ದು ಇದೇ ನಾಡಲ್ಲಿ, ನಾನು ಹುಟ್ಟಿದ್ದು ಇಲ್ಲೆ, ನಾವು ಭಾರತೀಯರು. ಇಲ್ಲೆ ಹುಟ್ಟಿ ಬೆಳೆದು ದೇಶದಲ್ಲಿ ಭಯೋತ್ಪಾದನೆ ಕೃತ್ಯ ನಡೆಸಿದ ಆತ ನನ್ನ ಮಗನಾಗಲು ಸಾಧ್ಯವಿಲ್ಲ. ಆತನ ಭಯೋತ್ಪಾದನೆಯ ಕೃತ್ಯಗಳು ನನಗೆ ತಿಳಿದಿರಲಿಲ್ಲ. ಹೀಗಾಗಿ ನಾನು ಆತನ ಮೃತದೇಹ ಸ್ವೀಕರಿಸಲ್ಲ ಎಂದು ಸರ್ತಾಜ್ ಹೇಳಿದ್ದಾರೆ. 
ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆಯ 9 ಮಂದಿ ಭಯೋತ್ಪಾದಕರ ಪೈಕಿ ಸೈಫುಲ್ಲಾ ಸಹ ಒಬ್ಬನಾಗಿದ್ದ. ಲಖನೌ ಹೊರವಲಯದ ಠಾಕೂರ್ ಗಂಜ್ ಮನೆಯೊಂದರಲ್ಲಿ ಅಡಗಿ ಕುಳಿತಿದ್ದ ಸೈಫುಲ್ಲಾನನ್ನು  ಹೊಡೆದುರುಳಿಸುವಲ್ಲಿ ಭಯೋತ್ಪಾದನಾ ನಿಗ್ರಹ ದಳ ಯಶಸ್ವಿಯಾಗಿತ್ತು. 
ಉಜ್ಜೈನ್ ರೈಲು ಸ್ಫೋಟ ಪ್ರಕರಣದಲ್ಲಿ ಒಟ್ಟು 9 ಮಂದಿ ಶಂಕಿತ ಉಗ್ರರ ಕೈವಾಡದ ಕುರಿತು ಮಾಹಿತಿಗಳು ಲಭ್ಯವಾಗಿವೆ.
ಮೃತ ಉಗ್ರ ಸೈಫುಲ್ಲಾ ಕಾನ್ಪುರದಲ್ಲಿ ವಾಸವಾಗಿದ್ದು, ಸೈಫುಲ್ಲಾನ ಇಬ್ಬರು ಸೋದರರನ್ನು ನಿನ್ನೆ ಪೊಲೀಸರು ಬಂಧಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಲವ್ ಅಲ್ಲ ಅದು 'ಬಲವಂತದ ಮದುವೆ': ಕಾಂಗ್ರೆಸ್‌ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ದೇವೇಗೌಡ!

'ಅಶ್ಲೀಲ ಅಲ್ಲ, ಹಾಡನ್ನು Rewrite ಮಾಡ್ತೇನೆ': ನಿರ್ದೇಶಕ Prem ಕ್ಷಮೆಯಾಚನೆ! ನಟಿ ನೋರಾ, ಸಾಹಿತಿ ಅಲಂ ಬಗ್ಗೆಯೂ ಕಿಡಿ! Video

ಇದ್ದಕ್ಕಿದ್ದಂತೆ Beep ಶಬ್ದ: 'ರಂಗಸ್ಥಳಂ' ನಟನಿಂದ ಅನುಚಿತ ವರ್ತನೆ? ಕೊನೆಗೂ ನಟಿ Sreeleela ಸ್ಪಷ್ಟನೆ

ಪಶ್ಚಿಮ ಬಂಗಾಳ ಚುನಾವಣೆ: 74 ಹಾಲಿ ಶಾಸಕರಿಗೆ ಟಿಕೆಟ್ ನಿರಾಕರಿಸಿದ ದೀದಿ; ಭುಗಿಲೆದ್ದ ಅಸಮಾಧಾನ

News wrap 18-03-2026 | ಸರ್ಕಾರಕ್ಕೆ ಹೊರಟ್ಟಿ ಗಡುವು; ವಿಧಾನಸಭೆಯಲ್ಲಿ ಮರ್ಯಾದಾ ಹತ್ಯೆ ನಿಷೇಧ ಮಸೂದೆ ಮಂಡನೆ; 150 LPG ಸಿಲಿಂಡರ್ ವಶಕ್ಕೆ

SCROLL FOR NEXT