ಸಾಮೂಹಿಕ ವಿವಾಹ 
ದೇಶ

ವಿಶ್ವ ದಾಖಲೆ ಬರೆದ ಅಂಗವಿಕಲರ ಸಾಮೂಹಿಕ ವಿವಾಹ!

ಮಧ್ಯ ಪ್ರದೇಶದ ಉಜ್ಜಯಿನಿ ನಗರ ಐತಿಹಾಸಿಕ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದು, ಏಕಕಾಲಕ್ಕೆ 104 ಅಂಗವಿಕಲರು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ್ದಾರೆ.

ಉಜ್ಜಯಿನಿ: ಮಧ್ಯ ಪ್ರದೇಶದ ಉಜ್ಜಯಿನಿ ನಗರ ಐತಿಹಾಸಿಕ ದಾಖಲೆಯೊಂದಕ್ಕೆ ಸಾಕ್ಷಿಯಾಗಿದ್ದು, ಏಕಕಾಲಕ್ಕೆ 104 ಅಂಗವಿಕಲರು ದಾಂಪತ್ಯ ಜೀವನಕ್ಕೆ ಕಾಲಿಡುವ ಮೂಲಕ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ್ದಾರೆ.

ಮಧ್ಯ ಪ್ರದೇಶದ ಉಜ್ಜಯಿನಿಯಲ್ಲಿ ನಿನ್ನೆ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ವಿಶೇಷವೆಂದರೆ ಆ ಸಾಮೂಹಿಕ ವಿವಾಹದಲ್ಲಿ ಪಾಲ್ಗೊಂಡಿದ್ದ ಎಲ್ಲ ದಂಪತಿಗಳೂ ಅಂಗವಿಕಲರಾಗಿದ್ದರು. ಬರೊಬ್ಬರಿ 104  ಅಂಗವಿಕಲ ಜೋಡಿಗಳು ಏಕಕಾಲಕ್ಕೆ ದಾಪಂತ್ಯ ಜೀವನಕ್ಕೆ ಕಾಲಿಡುವ ಮೂಲಕ ಅಪರೂಪದ ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ಬಗ್ಗೆ ಸ್ವತಃ ಮಧ್ಯ ಪ್ರದೇಶ ಸರ್ಕಾರದ ಸಾರ್ವಜನಿಕ ಸಂಪರ್ಕ ಇಲಾಖೆ ಅಧಿಕಾರಿಗಳು ಮಾಹಿತಿ  ನೀಡಿದ್ದು, 104 ಅಂಗ ವಿಕಲ ಜೋಡಿಗಳು ಏಕಕಾಲಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವುದು ಇದೇ ಮೊದಲ ಬಾರಿಯಾಗಿದೆ ಎಂದು ಹೇಳಿದ್ದಾರೆ.

ಇನ್ನು ಈ 104 ಜೋಡಿಗಳ ಪೈಕಿ 77 ಹಿಂದೂ ದಂಪತಿಗಳು, 26 ಮುಸ್ಲಿಂ ಹಾಗೂ ಒಂದು ಸಿಖ್ ಜೋಡಿ ಹಸೆ ಮಣೆ ಏರಿದ್ದರು. ಉಜ್ಜಯಿನಿ ಜಿಲ್ಲಾಡಳಿತ ಈ ವಿಶೇಷ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿತ್ತು, ಇದೇ ವೇಳೆ  ವಿವಾಹಿತ ದಂಪತಿಗಳಿಗಾಗಿ ನೀಡಲು ಸಾರ್ವಜನಿಕರು ತಂದಿದ್ದ ವಿಶೇಷ ಉಡುಗೊರೆ ಕೂಡ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಸೇರಿದ್ದು, ಸಾರ್ವಜನಿಕರು ನೀಡಿದ ಅತೀದೊಡ್ಡ ಉಡುಗೊರೆ ಬಾಕ್ಸ್ ಎಂಬ ಕೀರ್ತಿಗೂ ಈ  ವಿಶೇಷ ಉಡುಗೊರೆ ಭಾಜನವಾಯಿತು.

ಇದೇ ವೇಳೆ ಗೋಲ್ಡನ್ ಬುಕ್ ರೆಕಾರ್ಡ್ಸ್ ತಂಡ ಅಧಿಕಾರಿಗಳು ಮಧ್ಯ ಪ್ರದೇಶ ಸರ್ಕಾರಕ್ಕೆ ವಿಶ್ವ ದಾಖಲೆ ಪ್ರಮಾಣ ಪತ್ರವನ್ನು ಹಸ್ತಾಂತರಿಸಿದರು ಎಂದು ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಕೇಂದ್ರ ಸಚಿವ  ತಾವರ್ ಚಾಂದ್ ಗೆಹ್ಲೂಟ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

SCROLL FOR NEXT