ರಾಜೀವ್ ಚಂದ್ರಶೇಖರ್ 
ದೇಶ

'ಪಾಕಿಸ್ತಾನ ಭಯೋತ್ಪಾದಕ ದೇಶ' ಮಸೂದೆ ಹಿಂಪಡೆದ ರಾಜೀವ್ ಚಂದ್ರಶೇಖರ್

ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ....

ನವದೆಹಲಿ: ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಎನ್ ಡಿಎ ಕೇರಳದ ಉಪಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ತಾವು ಮಂಡಿಸಿದ್ದ ಖಾಸಗಿ ಮಸೂದೆಯನ್ನು ಶುಕ್ರವಾರ ವಾಪಸ್ ಪಡೆದಿದ್ದಾರೆ.
ರಾಜೀವ್ ಚಂದ್ರಶೇಖರ್ ಅವರು ಪಾಕಿಸ್ತಾನವನ್ನು ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸುವ ಖಾಸಗಿ ಮಸೂದೆ (The Declaration of Countries as Sponsor of Terrorism Bill, 2016) ಯನ್ನು ಕಳೆದ ಫೆ.3ರಂದು ಮಂಡಿಸಿ ಕೇಂದ್ರ ಸರ್ಕಾರ ಅದನ್ನು ಪುರಸ್ಕರಿಸಬೇಕೆಂದು ಆಗ್ರಹಿಸಿದ್ದರು. ಆದರೆ ರಾಜೀವ್ ಚಂದ್ರಶೇಖರ್ ಅವರ ಮಸೂದೆಯನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಸೂದೆ ಹಿಂಪಡೆದಿದ್ದಾರೆ.
ಪದೇ ಪದೇ ಭಾರತದ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸಿ ಅದರೊಂದಿಗಿನ ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಸಂಬಂಧಗಳನ್ನು ಕಡಿದುಕೊಳ್ಳಬೇಕು. ಆ ಮೂಲಕ ಪಾಕಿಸ್ತಾನವನ್ನು ಅಂತಾರಾಷ್ಟ್ರೀಯ ಸಮುದಾಯದಲ್ಲಿ ಒಂಟಿಯಾಗಿಸಬೇಕೆಂದು ರಾಜೀವ್ ಚಂದ್ರಶೇಖರ್ ಖಾಸಗಿ ಮಸೂದೆ ಮಂಡನೆ ವೇಳೆ ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್‌ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್‌ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!

"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್‌ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ