ರಾಜೀವ್ ಚಂದ್ರಶೇಖರ್ 
ದೇಶ

'ಪಾಕಿಸ್ತಾನ ಭಯೋತ್ಪಾದಕ ದೇಶ' ಮಸೂದೆ ಹಿಂಪಡೆದ ರಾಜೀವ್ ಚಂದ್ರಶೇಖರ್

ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ....

ನವದೆಹಲಿ: ಪಾಕಿಸ್ತಾನವನ್ನು ‘ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರವೆಂದು ಘೋಷಣೆ ಮಾಡಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಎನ್ ಡಿಎ ಕೇರಳದ ಉಪಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ತಾವು ಮಂಡಿಸಿದ್ದ ಖಾಸಗಿ ಮಸೂದೆಯನ್ನು ಶುಕ್ರವಾರ ವಾಪಸ್ ಪಡೆದಿದ್ದಾರೆ.
ರಾಜೀವ್ ಚಂದ್ರಶೇಖರ್ ಅವರು ಪಾಕಿಸ್ತಾನವನ್ನು ಭಯೋತ್ಪಾದನೆ ಪ್ರಾಯೋಜಿತ ರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸುವ ಖಾಸಗಿ ಮಸೂದೆ (The Declaration of Countries as Sponsor of Terrorism Bill, 2016) ಯನ್ನು ಕಳೆದ ಫೆ.3ರಂದು ಮಂಡಿಸಿ ಕೇಂದ್ರ ಸರ್ಕಾರ ಅದನ್ನು ಪುರಸ್ಕರಿಸಬೇಕೆಂದು ಆಗ್ರಹಿಸಿದ್ದರು. ಆದರೆ ರಾಜೀವ್ ಚಂದ್ರಶೇಖರ್ ಅವರ ಮಸೂದೆಯನ್ನು ಅಂಗೀಕರಿಸಲು ಕೇಂದ್ರ ಸರ್ಕಾರ ನಿರಾಕರಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಸೂದೆ ಹಿಂಪಡೆದಿದ್ದಾರೆ.
ಪದೇ ಪದೇ ಭಾರತದ ಮೇಲೆ ದಾಳಿ ನಡೆಸುತ್ತಿರುವ ಪಾಕಿಸ್ತಾನವನ್ನು ಭಯೋತ್ಪಾದಕ ರಾಷ್ಟ್ರ ಎಂದು ಅಧಿಕೃತವಾಗಿ ಘೋಷಿಸಿ ಅದರೊಂದಿಗಿನ ಎಲ್ಲಾ ರೀತಿಯ ಅಂತಾರಾಷ್ಟ್ರೀಯ ಸಂಬಂಧಗಳನ್ನು ಕಡಿದುಕೊಳ್ಳಬೇಕು. ಆ ಮೂಲಕ ಪಾಕಿಸ್ತಾನವನ್ನು ಅಂತಾರಾಷ್ಟ್ರೀಯ ಸಮುದಾಯದಲ್ಲಿ ಒಂಟಿಯಾಗಿಸಬೇಕೆಂದು ರಾಜೀವ್ ಚಂದ್ರಶೇಖರ್ ಖಾಸಗಿ ಮಸೂದೆ ಮಂಡನೆ ವೇಳೆ ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT