ಓಮರ್ ಅಬ್ದುಲ್ಲಾ 
ದೇಶ

2019 ನ್ನೂ ಮರೆತುಬಿಡಿ 2024 ಕ್ಕೆ ತಯಾರಿ ನಡೆಸಬೇಕಿದೆ: ಬಿಜೆಪಿ ಗೆಲುವಿನ ಬಗ್ಗೆ ಓಮರ್ ಅಬ್ದುಲ್ಲಾ

ಜಮ್ಮು-ಕಾಶ್ಮೀರ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, 2019 ನ್ನೂ ಮರೆತು 2024 ಕ್ಕೆ ತಯಾರಿ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ.

ಶ್ರೀನಗರ: ಉತ್ತರ ಪ್ರದೇಶ, ಉತ್ತರಾಖಂಡ್ ರಾಜ್ಯಗಳಲ್ಲಿ ಚುನಾವಣೋತ್ತರ ಸಮೀಕ್ಷೆ, ನಿರೀಕ್ಷೆಗೂ ಮೀರಿದ ರೀತಿಯಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರ ಗೆಲುವಿನ ನಾಗಾಲೋಟದ ಬಗ್ಗೆ ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, 2019 ನ್ನೂ ಮರೆತು 2024 ಕ್ಕೆ ತಯಾರಿ ನಡೆಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದ್ದಾರೆ. 
ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೇವಲ ಟೀಕಿಸುವುದರಿಂದ ನಾವು ಎನನ್ನೂ ಸಾಧಿಸಲು ಸಾಧ್ಯವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪರ್ಯಾಯವಾಗಿ ಸಕಾರಾತ್ಮಕ ದೂರದೃಷ್ಟಿ ಹೊಂದಿರುವ ನಾಯಕತ್ವದ ಬಗ್ಗೆ ಮತದಾರರಿಗೆ ಅರಿವು ಮೂಡಿಸಬೇಕಿದೆ ಎಂದು ಓಮರ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿಯನ್ನು ಎದುರಿಸಲು ಖಂಡಿತಾ ಸಾಧ್ಯವಿದೆ ಎಂಬುದನ್ನು ಪಂಜಾಬ್, ಗೋವಾ, ಮಣಿಪುರ ರಾಜ್ಯಗಳು ಸ್ಪಷ್ಟವಾಗಿ ಸೂಚಿಸುತ್ತಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸುಖಾಸುಮ್ಮನೆ ಟೀಕಿಸುವುದನ್ನು ಬಿಟ್ಟು ಸಕಾರಾತ್ಮಕವಾದ ಪರ್ಯಾಯವನ್ನು ನೀಡಬೇಕಷ್ಟೇ ಎಂದು ಅಬ್ದುಲ್ಲಾ ಹೇಳಿದ್ದಾರೆ. 
ಈಗ ಸಮಸ್ತ ಭಾರತ ಒಪ್ಪುವ, 2019 ರಲ್ಲಿ ಬಿಜೆಪಿ, ನರೇಂದ್ರ ಮೋದಿ ಅವರನ್ನು ಎದುರಿಸುವ ಸಾಮರ್ಥ್ಯ ಇರುವ ನಾಯಕನೇ ಇಲ್ಲದಂತಾಗಿದೆ. ಆದ್ದರಿಂದ 2019 ನ್ನೂ ಮರೆತು 2024 ಕ್ಕೆ ತಯಾರಿ ನಡೆಸಬೇಕಿದೆ ಎಂದು ಓಮರ್ ಅಬ್ದುಲ್ಲಾ ಟ್ವೀಟ್ ಮಾಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!