ಮುಲಾಯಂ ಸಿಂಗ್ ಯಾದವ್ 
ದೇಶ

ಉತ್ತರ ಪ್ರದೇಶ ಸೋಲಿಗೆ ಅಖಿಲೇಶ್ ಯಾದವ್ ದೂರಬೇಡಿ: ಮುಲಾಯಂ

ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಭಾನುವಾರ ವಿಧಾನಸಭೆ ಚುನಾವಣೆಯಲ್ಲಿ...

ಎಟವಾ: ಸಮಾಜವಾದಿ ಪಕ್ಷದ ಹಿರಿಯ ಮುಖಂಡ ಮುಲಾಯಂ ಸಿಂಗ್ ಯಾದವ್ ಅವರು ಭಾನುವಾರ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ ತಮ್ಮ ಪುತ್ರ ಹಾಗೂ ನಿರ್ಗಮಿತ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ಬೆಂಬಲಕ್ಕೆ ನಿಂತಿದ್ದು, ಸೋಲಿನ ಹೊಣೆ ಯಾರೂ ಹೊರಬೇಕಾಗಿಲ್ಲ ಎಂದಿದ್ದಾರೆ.
ಚುನಾವಣೆ ಸೋಲಿಗೆ ಅಖಿಲೇಶ್ ಯಾದವ್ ರನ್ನು ದೂರಬೇಡಿ ಎಂದಿರುವ ಮುಲಾಯಂ, ಪಕ್ಷದ ವೈಫಲ್ಯವೇ ಸೋಲಿಗೆ ಕಾರಣ ಎಂದಿದ್ದಾರೆ. ಜನರ ಮನ ಗೆಲ್ಲುವಲ್ಲಿ ನಾವು ವಿಫಲರಾಗಿದ್ದು, ಪ್ರತಿಯೊಬ್ಬರು ಈ ಸೋಲಿನ ಹೊಣೆ ಹೊರಬೇಕು ಎಂದು ಹೇಳಿದ್ದಾರೆ.
ಇನ್ನು ಚುನಾವಣೆಯಲ್ಲಿ ಸೋಲು, ಗೆಲುವು ಸಾಮಾನ್ಯ. ಸಮಾಜವಾದಿ ಪಕ್ಷ ಹಲವು ಹೋರಾಟಗಳನ್ನು ಮಾಡಿ ಅಧಿಕಾರಕ್ಕೆ ಬಂದಿತ್ತು. ಸಾಕಷ್ಟು ಹೋರಾಟ ಮಾಡಿ ಹಲವು ಬಾರಿ ಗೆದ್ದಿದ್ದೇವೆ ಈಗ ಮತ್ತೆ ಹೋರಾಟ ನಡೆಸಿ ಮುಂದಿನ ಬಾರಿ ಗೆಲುವು ಸಾಧಿಸೋಣ ಎಂದು ಅಖಿಲೇಶ್ ಯಾದವ್ ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT