ಪ್ರಕಾಶ್ ಸಿಂಗ್ ಬಾದಲ್ 
ದೇಶ

ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಕಾಶ್ ಸಿಂಗ್ ಬಾದಲ್ ರಾಜಿನಾಮೆ

ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿರುವುದರಿಂದ...

ಚಂಡೀಘಡ್: ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ-ಅಕಾಲಿದಳ ಮೈತ್ರಿಕೂಟಕ್ಕೆ ಭಾರಿ ಮುಖಭಂಗವಾಗಿರುವುದರಿಂದ ಭಾನುವಾರ ಪ್ರಕಾಶ್ ಸಿಂಗ್ ಬಾದಲ್  ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ವಿ.ಪಿ.ಸಿಂಗ್ ಅವರಿಗೆ ಬಾದಲ್ ಅವರು ರಾಜಿನಾಮೆ ಪತ್ರ ಸಲ್ಲಿಸಿದ್ದು, ಬಾದಲ್ ರಾಜಿನಾಮೆ ಅಂಗೀಕರಿಸಿದ ರಾಜ್ಯಪಾಲರು ನೂತನ ಸರ್ಕಾರ ರಚನೆಯಾಗುವವರೆಗೆ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರೆಯುವಂತೆ ಸೂಚಿಸಿರುವುದಾಗಿ ರಾಜಭವನದ ವಕ್ತಾರರು ತಿಳಿಸಿದ್ದಾರೆ.
ಐದು ಬಾರಿ ಪಂಜಾಬ್ ಮುಖ್ಯಮಂತ್ರಿಯಾಗಿದ್ದ 89 ವರ್ಷದ ಪ್ರಕಾಶ್ ಸಿಂಗ್ ಬಾದಲ್ ಅವರು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ವಿರುದ್ಧ ಗೆಲುವು ಸಾಧಿಸಿದ್ದಾರೆ.
ನಿನ್ನೆ ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದ ಬಾದಲ್, "ಈ ಫಲಿತಾಂಶ ನಿಜಕ್ಕೂ ಆಘಾತ ತಂದಿದೆ. ಇಂತಹ ಫಲಿತಾಂಶವನ್ನು ನಾವು ನಿರೀಕ್ಷಿಸರಲಿಲ್ಲ. ಆದರೂ ಮತದಾರರ ತೀರ್ಪನ್ನು ಗೌರವಿಸಬೇಕು. ಹೀಗಾಗಿ ನಾಳೆಯೇ ಸಿಎಂ ಸ್ಥಾನಕ್ಕೆ ರಾಜಿನಾಮೆ ನೀಡುತ್ತೇನೆ. ಅಂತೆಯೇ  ಕೋರ್ ಕಮಿಟಿ ಸಭೆ ಕರೆದು ಸಭೆಯಲ್ಲಿ ಚುನಾವಣಾ ಸೋಲಿನ ಕುರಿತಂತೆ ಪರಾಮರ್ಶೆ ನಡೆಸುತ್ತೇವೆ. ಸೋಲಿಗೆ ಕಾರಣವಾದ ಅಂಶಗಳನ್ನು ಪತ್ತೆ ಹಚ್ಚಲಾಗುತ್ತದೆ ಎಂದು ತಿಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT