ಸಂಗ್ರಹ ಚಿತ್ರ 
ದೇಶ

ಕಳ್ಳತನವಾಗಿದ್ದ ಕೈಲಾಶ್ ಸತ್ಯಾರ್ಥಿ ನೊಬೆಲ್ ಸಮ್ಮಾನ ಪತ್ರ ಅರಣ್ಯದಲ್ಲಿ ಪತ್ತೆ!

ನೊಬೆಲ್ ಪ್ರಶಸ್ತಿ ವಿಜೇತ ಹಾಗೂ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್‌ ಸತ್ಯಾರ್ಥಿಯವರ ಕಳವಾಗಿದ್ದ ನೊಬೆಲ್‌ ಸಮ್ಮಾನ ಪತ್ರ ದಕ್ಷಿಣ ದೆಹಲಿಯ ಸಂಗಮ್‌ ವಿಹಾರ್‌ ಪ್ರದೇಶದ ಅರಣ್ಯದಲ್ಲಿ ಪತ್ತೆಯಾಗಿದೆ.

ನವದೆಹಲಿ: ನೊಬೆಲ್ ಪ್ರಶಸ್ತಿ ವಿಜೇತ ಹಾಗೂ ಮಕ್ಕಳ ಹಕ್ಕುಗಳ ಹೋರಾಟಗಾರ ಕೈಲಾಶ್‌ ಸತ್ಯಾರ್ಥಿಯವರ ಕಳವಾಗಿದ್ದ ನೊಬೆಲ್‌ ಸಮ್ಮಾನ ಪತ್ರ ದಕ್ಷಿಣ ದೆಹಲಿಯ ಸಂಗಮ್‌ ವಿಹಾರ್‌ ಪ್ರದೇಶದ ಅರಣ್ಯದಲ್ಲಿ ಪತ್ತೆಯಾಗಿದೆ.

ದಕ್ಷಿಣ ದೆಹಲಿಯಲ್ಲಿರುವ ಸತ್ಯಾರ್ಥಿಯವರ ನಿವಾಸದಲ್ಲಿ ಕಳೆದ ಫೆಬ್ರವರಿ 6ರ ರಾತ್ರಿ ಕಳ್ಳತನವಾಗಿ, ನೊಬೆಲ್ ಸಮ್ಮಾನ ಪತ್ರ ಹಾಗೂ ಪದಕ ಸೇರಿದಂತೆ ಹಲವು ವಸ್ತುಗಳು ಕಳವಾಗಿದ್ದವು. ಈ ಹಿನ್ನಲೆಯಲ್ಲಿ ಪ್ರಕರಣ  ದಾಖಲಿಸಿಕೊಂಡಿದ್ದ ಪೊಲೀಸರು ವಿಚಾರಣೆ ನಡೆಸಿ ಫೆಬ್ರವರಿ 12ರಂದು ಮೂವರನ್ನು ಬಂಧಿಸಿದ್ದರು. ಈ ಸಂದರ್ಭದಲ್ಲಿ ನೊಬೆಲ್‌ ಪ್ರತಿಕೃತಿ ಮತ್ತು ಕಳವಾದ ಇತರೆ ವಸ್ತುಗಳು ಪತ್ತೆಯಾಗಿದ್ದವು. ಆದರೆ ಪದಕದ ಜೊತೆ  ನೀಡಲಾಗುವ ಪತ್ರ ಮಾತ್ರ ಪತ್ತೆಯಾಗಿರಲಿಲ್ಲ. ಕಳವು ಮಾಡಿದ ವ್ಯಕ್ತಿ ನೊಬೆಲ್‌ ಪತ್ರವನ್ನು ಹಾಳೆ ಎಂದು ಭಾವಿಸಿ ಅದನ್ನು ಅರಣ್ಯದಲ್ಲಿ ಎಸೆದು ಹೋಗಿದ್ದ.

ಇದೀಗ ಆ ನೊಬೆಲ್ ಸಮ್ಮಾನ ಪತ್ರ ದೊರೆತಿದ್ದು, ಪತ್ರದೊಂದಿಗೆ ಇತರೆ ವಸ್ತುಗಳು ಕೂಡ ದೊರೆತಿದೆ. ಪೊಲೀಸರು ಅದನ್ನು ಕೈಲಾಶ್ ಸತ್ಯಾರ್ಥಿ ಅವರಿಗೆ ತಲುಪಿಸಿದ್ದಾರೆ ಎಂದು ತಿಳಿದುಬಂದಿದೆ.

2014ರಲ್ಲಿ ಮಕ್ಕಳ ಹಕ್ಕುಗಳ ಹೋರಾಟಕ್ಕಾಗಿ ಕೈಲಾಶ್ ಸತ್ಯಾರ್ಥಿ ಅವರು ಪಾಕಿಸ್ತಾನದ ಮಲಾಲಾ ಯೂಸುಫ್ ಝೈ ಅವರೊಂದಿಗೆ ಜಂಟಿ ನೊಬೆಲ್ ಪಾರಿತೋಷಕ ಪಡೆದಿದ್ದರು. ಮಲಾಲಾ ಪಾಕಿಸ್ತಾನ ಬುಡುಕಟ್ಟು ಪ್ರದೇಶದಲ್ಲಿ  ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಹೋರಾಟ ಮಾಡಿ ಖ್ಯಾತಿ ಪಡೆದಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT