ನ್ಯಾ.ಕರ್ಣನ್ ಮತ್ತು ಜೇಠ್ಮಲಾನಿ 
ದೇಶ

ನ್ಯಾಯಾಂಗ ವ್ಯವಸ್ಥೆಯನ್ನು ದುರ್ಬಲಗೊಳಿಸಬೇಡಿ: ಜಸ್ಟಿಸ್ ಕರ್ಣನ್ ವಿರುದ್ಧ ಜೇಠ್ಮಲಾನಿ ಆಕ್ರೋಶ!

ನ್ಯಾಯಾಂಗ ವ್ಯವಸ್ಥೆ ವಿರುದ್ಧ ಕಟುವಾಗಿ ಟೀಕೆ ಮಾಡಿ ನ್ಯಾಯಾಂಗ ನಿಂದನೆ ತೂಗುಗತ್ತಿಯಡಿಯಲ್ಲಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಕರ್ಣನ್ ಅವರ ವಿರುದ್ಧ ಹಿರಿಯ ವಕೀಲ ಹಾಗೂ ಮಾಜಿ ಕೇಂದ್ರ ಸಚಿವ ರಾಮ್ ಜೇಠ್ಮಲಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನವದೆಹಲಿ: ನ್ಯಾಯಾಂಗ ವ್ಯವಸ್ಥೆ ವಿರುದ್ಧ ಕಟುವಾಗಿ ಟೀಕೆ ಮಾಡಿ ನ್ಯಾಯಾಂಗ ನಿಂದನೆ ತೂಗುಗತ್ತಿಯಡಿಯಲ್ಲಿರುವ ಕೋಲ್ಕತಾ ಹೈಕೋರ್ಟ್ ನ್ಯಾಯಮೂರ್ತಿ ಜಸ್ಟಿಸ್ ಕರ್ಣನ್ ಅವರ ವಿರುದ್ಧ ಹಿರಿಯ ವಕೀಲ ಹಾಗೂ ಮಾಜಿ  ಕೇಂದ್ರ ಸಚಿವ ರಾಮ್ ಜೇಠ್ಮಲಾನಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ನ್ಯಾಯಾಂಗ ವ್ಯವಸ್ಥೆ ಕುರಿತಂತೆ ಕರ್ಣನ್ ಅವರು ಎತ್ತಿರುವ ಪ್ರಶ್ನೆಗಳ ಕುರಿತಂತೆ ಬಹಿರಂಗ ಪತ್ರವೊಂದನ್ನು ಬರೆದಿರುವ ರಾಮ್ ಜೇಠ್ಮಲಾನಿ ಅವರು, ಓರ್ವ ನ್ಯಾಯಾಧೀಶರಾಗಿದ್ದುಕೊಂಡು ನ್ಯಾಯಾಂಗ ವ್ಯವಸ್ಥೆಯನ್ನು  ದುರ್ಬಲಗೊಳಿಸುವ ಪ್ರಯತ್ನ ಮಾಡಬೇಡಿ ಎಂದು ಹೇಳಿದ್ದಾರೆ. ಅಂತೆಯೇ ನ್ಯಾಯಾಂಗ ವ್ಯವಸ್ಥೆ ಕುರಿತು ತಾವಾಡಿರುವ ಮಾತುಗಳನ್ನು ಕೂಡಲೇ ಬೇಷರತ್ ಹಿಂಪಡೆಯುವಂತೆಯೂ ಸಲಹೆ ನೀಡಿದ್ದಾರೆ.

"ಓರ್ವ ವಕೀಲನಾಗಿ ನಾನು ಜೀವನ ಪರ್ಯಂತ ಹಿಂದುಳಿದ ವರ್ಗದವರಿಗಾಗಿ ಹೋರಾಡಿದ್ದೇನೆ. ವೈಯುಕ್ತಿಕವಾಗಿ ಹಿಂದುಳಿದ ವರ್ಗದವರಿಗೆ ಸಂಬಂಧಿಸಿದಂತೆ ನನ್ನಲ್ಲಿ ಅತೀವ ಕಾಳಜಿ ಮತ್ತು ಸಹಾನುಭೂತಿ ಇದೆ. ಆದರೆ  ನೀವಾಡಿರುವ ಮಾತುಗಳು ಅವರ ಹಿತಾಸಕ್ತಿಗೆ ದೊಡ್ಡ ಹಾನಿಯನ್ನುಂಟು ಮಾಡುತ್ತಿವೆ. ಭ್ರಷ್ಟಾಚಾರ ಪ್ರಾಬಲ್ಯವಿರುವ ಈ ದೇಶದಲ್ಲಿ, ನ್ಯಾಯಾಂಗ ವ್ಯವಸ್ಥೆ ಮಾತ್ರ ಜನರನ್ನು ರಕ್ಷಿಸುವ ಏಕೈಕ ವ್ಯವಸ್ಥೆಯಾಗಿದ್ದು, ಅದನ್ನು  ನಾಶಗೊಳಿಸುವ ಅಥವಾ ದುರ್ಬಲಗೊಳಿಸಬೇಡಿ" ಎಂದು ಜೇಠ್ಮಲಾನಿ ತಿಳಿಸಿದ್ದಾರೆ.

ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಮಾರ್ಚ್ 31ರಂದು ಖುದ್ದಾಗಿ ಹಾಜರಾಗಬೇಕೆಂದು ಸುಪ್ರೀಂಕೋರ್ಟ್ ನ್ಯಾ. ಕರ್ಣನ್ ಅವರಿಗೆ ಈ ಹಿಂದೆ ಜಾಮೀನು ಸಹಿತ ವಾರೆಂಟ್ ಹೊರಡಿಸಿತ್ತು. ಈ ಪ್ರಕರಣಕ್ಕೂ ಮುನ್ನ ಮತ್ತು ನಂತರ  ಕರ್ಣನ್ ಅವರು ನ್ಯಾಯಾಂಗ ವ್ಯವಸ್ಥೆಯನ್ನು ಕಟುವಾಗಿ ಟೀಕಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT