ನೇಪಾಳ ಉಪ ಪ್ರಧಾನಿ ಬಿಮಲೇಂದ್ರ ನಿಧಿ 
ದೇಶ

ಗಡಿ ಸಮಸ್ಯೆಯನ್ನು ರಾಜತಾಂತ್ರಿಕವಾಗಿ, ರಾಜಕೀಯವಾಗಿ ಬಗೆಹರಿಸಬೇಕು: ನೇಪಾಳ ಉಪ ಪ್ರಧಾನಿ

ನೇಪಾಳ ಮತ್ತು ಭಾರತ ನಡುವಿನ ಗಡಿ ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಮತ್ತು ರಾಜಕೀಯವಾಗಿ...

ನವದೆಹಲಿ: ನೇಪಾಳ ಮತ್ತು ಭಾರತ ನಡುವಿನ ಗಡಿ ಸಮಸ್ಯೆಯನ್ನು ರಾಜತಾಂತ್ರಿಕವಾಗಿ ಮತ್ತು ರಾಜಕೀಯವಾಗಿ ಬಗೆಹರಿಸಬೇಕೆಂದು ನೇಪಾಳ ಉಪ ಪ್ರಧಾನಿ ಬಿಮಲೇಂದ್ರ ನಿಧಿ ಹೇಳಿದ್ದಾರೆ.
ಭಾರತೀಯ ಭದ್ರತಾ ಪಡೆಯಿಂದ ನೇಪಾಳಿ ಪ್ರಜೆ ಹತ್ಯೆಗೀಡಾದ ಪ್ರಕರಣಕ್ಕೆ ಸಂಬಂಧಿಸಿ ಅವರು ಈ ಹೇಳಿಕೆ ನೀಡಿದರು.
ಗಡಿ ವಿವಾದವನ್ನು ರಾಜತಾಂತ್ರಿಕವಾಗಿ ಮತ್ತು ರಾಜಕೀಯವಾಗಿ ಬಗೆಹರಿಸಬೇಕು. ಇದಕ್ಕಾಗಿ ಭಾರತ ಮತ್ತು ನೇಪಾಳ ಮಧ್ಯೆ ಜಂಟಿ ತಾಂತ್ರಿಕ ತಂಡವಿದೆ ಎಂದರು. ನಿಧಿಯವರು ಪ್ರಸ್ತುತ ದೆಹಲಿಯಲ್ಲಿದ್ದು ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿ, ಹತ್ಯೆ ಘಟನೆಯನ್ನು ಶೀಘ್ರವೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಹತ್ಯೆಗೀಡಾದ ನೇಪಾಳಿ ಪ್ರಜೆಯ ಶವ ಪರೀಕ್ಷೆ ಹಾಗೂ ವಿಧಿವಿಜ್ಞಾನ ಪರೀಕ್ಷೆ ಮಾಡಿಸಿದರೆ ಸತ್ಯ ಹೊರಬರುತ್ತದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಗಡಿಯಲ್ಲಿ ಕದನದ ಸಂದರ್ಭದಲ್ಲಿ  ನೇಪಾಳಿ ಪ್ರಜೆ ಗೋವಿಂದ ಗೌತಮ್ ಹತ್ಯೆಗೆ ಸಂಬಂಧಪಟ್ಟಂತೆ ಭಾರತ ಈಗಾಗಲೇ ತನಿಖೆ ಆರಂಭಿಸಿದೆ. ತನಿಖೆ ನಡೆಯುತ್ತಿರುವ ಈ ಸಂದರ್ಭದಲ್ಲಿ ಉಭಯ ದೇಶಗಳ ನಾಯಕರು ಸಂಪರ್ಕದಲ್ಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

ಬಂಗಾಳ ಕೊಲ್ಲಿಯಲ್ಲಿ ಭೂಕಂಪ: ವಿಶಾಖಪಟ್ಟಣಂನಲ್ಲೂ ನಡುಗಿದ ಭೂಮಿ, ರಿಕ್ಟರ್ ಮಾಪಕದಲ್ಲಿ 4.5 ತೀವ್ರತೆ ದಾಖಲು..!

ಶೌಚಾಲಯ ಬಳಸುವ ನೆಪದಲ್ಲಿ ಮನೆಗೆ ನುಗ್ಗಿದ ಡೆಲಿವರಿ ಬಾಯ್: ಮಹಿಳೆಗೆ ಕಿರುಕುಳ, Video ವೈರಲ್

5ನೇ T20I: ಟ್ರಾಫಿಕ್‌ ಜಾಮ್ ನಲ್ಲಿ ಸಿಲುಕಿದ ಟೀಂ ಇಂಡಿಯಾ, 45 ನಿಮಿಷಗಳ ಕಾಲ ಪಂದ್ಯ ಮುಂದೂಡಿಕೆ!

ಅಮೆರಿಕದಲ್ಲಿ ಕೌಟುಂಬಿಕ ಹಿಂಸಾಚಾರ: ಭಾರತೀಯ ಮೂಲದ ಗೂಗಲ್ ಟೆಕ್ಕಿ ಹತ್ಯೆ; ಮಗನಿಗೂ ಗುಂಡೇಟು!