ಜೆ.ಮುತ್ತು ಕೃಷ್ಣನ್ 
ದೇಶ

ರೋಹಿತ್ ವೇಮುಲ ಅವರ ಚಳವಳಿಯನ್ನು ಮುಂದುವರಿಸಿದ್ದ ಜೆ.ಮುತ್ತು ಕೃಷ್ಣನ್

ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪಿಎಚ್ ಡಿ ವಿದ್ಯಾರ್ಥಿ ಮುತ್ತು ಕೃಷ್ಣನ್ ಈ ಹಿಂದೆ...

ನವದೆಹಲಿ: ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ಪಿಎಚ್ ಡಿ ವಿದ್ಯಾರ್ಥಿ ಜೆ. ಮುತ್ತು ಕೃಷ್ಣನ್ ಈ ಹಿಂದೆ ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿಯಾಗಿದ್ದರು.
ರೋಹಿತ್ ವೇಮುಲ ಆತ್ಮಹತ್ಯೆಯ ನಂತರ ವಿಶ್ವ ವಿದ್ಯಾಲಯದ ಚಳವಳಿಗಳಲ್ಲಿ ಮುಂಚೂಣಿಯಲ್ಲಿದ್ದರು. 
27 ವರ್ಷದ ಮುತ್ತು ಕೃಷ್ಣನ್ ತಮಿಳುನಾಡಿನ ಸೇಲಂ ಜಿಲ್ಲೆಯನವರಾಗಿದ್ದು ಎ.ಫಿಲ್ ಪದವಿಯನ್ನು 2015ರಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಮುಗಿಸಿದ್ದರು. ನಂತರ ಪಿಎಚ್ ಡಿಗೆ ದೆಹಲಿಯ ಜವಹರಲಾಲ್ ನೆಹರೂ ವಿಶ್ವ ವಿದ್ಯಾಲಯ ಸೇರಿದ್ದರು.
ವಿಶ್ವ ವಿದ್ಯಾಲಯದ ಜೆಲುಮ್ ಹಾಸ್ಟೆಲ್ ನಲ್ಲಿ ವಾಸಿಸುತ್ತಿದ್ದ ಮುತ್ತು ಕೃಷ್ಣನ್ ನಿನ್ನೆ ತನ್ನ ಸ್ನೇಹಿತನ ನಿವಾಸದಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು.
ರೋಹಿತ್ ವೇಮುಲ ಕುಟುಂಬದವರಿಗೆ ನ್ಯಾಯ ದೊರಕಿಸಿಕೊಡಬೇಕೆಂಬ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಮುತ್ತು ಕೃಷ್ಣ ಅವರನ್ನು ಗುರಿಯಾಗಿರಿಸಲಾಗಿತ್ತು. ಖಿನ್ನತೆಗೊಳಗಾಗಿ ಆತ್ಮಹತ್ಯೆಯ ಹಾದಿ ಹಿಡಿದಿದ್ದಾರೆ ಎಂದು ಜೆಎನ್ ಯು ವಿದ್ಯಾರ್ಥಿ ಸಂಘಟನೆ ಆರೋಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT