ಗಾಯತ್ರಿ ಪ್ರಜಾಪತಿ 
ದೇಶ

ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ, ಮಂಪರು ಪರೀಕ್ಷೆಗೆ ಸಿದ್ಧ: ಗಾಯತ್ರಿ ಪ್ರಜಾಪತಿ

ನನ್ನ ವಿರುದ್ಧ ಪಿತೂರಿ ನಡೆಸಲಾಗಿದ್ದು, ಪ್ರಕರಣ ಸಂಬಂಧ ಮಂಪರು ಪರೀಕ್ಷೆಗೆ ನಾನು ಸಿದ್ಧನಿದ್ದೇನೆಂದು ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಗಾಯತ್ರಿ ಪ್ರಜಾಪತಿ ಬುಧವಾರ ಹೇಳಿದ್ದಾರೆ...

ಲಖನೌ: ನನ್ನ ವಿರುದ್ಧ ಪಿತೂರಿ ನಡೆಸಲಾಗಿದ್ದು, ಪ್ರಕರಣ ಸಂಬಂಧ ಮಂಪರು ಪರೀಕ್ಷೆಗೆ ನಾನು ಸಿದ್ಧನಿದ್ದೇನೆಂದು ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಗಾಯತ್ರಿ ಪ್ರಜಾಪತಿ ಬುಧವಾರ ಹೇಳಿದ್ದಾರೆ.
ಮಹಿಳೆಯೊಬ್ಬರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರದ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಗಾಯತ್ರಿ ಪ್ರಜಾಪತಿ ಮತ್ತು ಇತರ ಆರು ಮಂದಿಯ ವಿರುದ್ಧ ಕಳೆದ ಫೆ.17ರಂದು ಸುಪ್ರೀಂಕೋರ್ಟ್ ಅಣತಿಯ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು. 
ಪ್ರಕರಣ ಬೆಳಕಿಗೆ ಬಂದು ಹಲವು ತಿಂಗಳುಗಳೇ ಕಳೆದರೂ ಆರೋಪಿ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸಲು ಸಾಧ್ಯವಾಗಿರಲಿಲ್ಲ. ಇಂದು ಬೆಳಿಗ್ಗೆ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸಲಾಗಿತ್ತು. ಬಂಧನಕ್ಕೊಳಪಡಿಸಿದ ಬಳಿಕ ಪ್ರಜಾಪತಿಯವರನ್ನು ಪೋಸ್ಕೋ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜಾಪತಿಯವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ. ಇದಲ್ಲದೆ, ಪ್ರಜಾಪತಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಮೂವರು ಸಹವರ್ತಿಗಳನ್ನೂ ಪೊಲೀಸರು ಬಂಧಿಸಿದ್ದು, ಪ್ರಕರಣ ಬೇಧಿಸುವಲ್ಲಿ ಮಹತ್ವದ ಸುಳಿವು ದೊರೆತಿದೆ ಎಂದು ಮೂಲಗಳು ತಿಳಿಸಿವೆ. 
ನ್ಯಾಯಾಂಗ ಬಂಧನಕ್ಕೊಳಪಡಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಪಿ ಗಾಯತ್ರಿ ಪ್ರಜಾಪತಿಯವರು, ನಾನು ನಿರಪರಾಧಿ, ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಪ್ರಕರಣ ಸಂಬಂಧ ಮಂಪರು ಪರೀಕ್ಷೆಗೆ ನಾನು ಸಿದ್ಧನಿದ್ದೇನೆ. ಆರೋಪ ಮಾಡುತ್ತಿರುವ ಮಹಿಳೆಯನ್ನೂ ಮಂಪರು ಪರೀಕ್ಷೆಗೊಳಪಡಿಸಿ. ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT