ಗಾಯತ್ರಿ ಪ್ರಜಾಪತಿ 
ದೇಶ

ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ, ಮಂಪರು ಪರೀಕ್ಷೆಗೆ ಸಿದ್ಧ: ಗಾಯತ್ರಿ ಪ್ರಜಾಪತಿ

ನನ್ನ ವಿರುದ್ಧ ಪಿತೂರಿ ನಡೆಸಲಾಗಿದ್ದು, ಪ್ರಕರಣ ಸಂಬಂಧ ಮಂಪರು ಪರೀಕ್ಷೆಗೆ ನಾನು ಸಿದ್ಧನಿದ್ದೇನೆಂದು ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಗಾಯತ್ರಿ ಪ್ರಜಾಪತಿ ಬುಧವಾರ ಹೇಳಿದ್ದಾರೆ...

ಲಖನೌ: ನನ್ನ ವಿರುದ್ಧ ಪಿತೂರಿ ನಡೆಸಲಾಗಿದ್ದು, ಪ್ರಕರಣ ಸಂಬಂಧ ಮಂಪರು ಪರೀಕ್ಷೆಗೆ ನಾನು ಸಿದ್ಧನಿದ್ದೇನೆಂದು ಅತ್ಯಾಚಾರ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಗಾಯತ್ರಿ ಪ್ರಜಾಪತಿ ಬುಧವಾರ ಹೇಳಿದ್ದಾರೆ.
ಮಹಿಳೆಯೊಬ್ಬರ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರದ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಗಾಯತ್ರಿ ಪ್ರಜಾಪತಿ ಮತ್ತು ಇತರ ಆರು ಮಂದಿಯ ವಿರುದ್ಧ ಕಳೆದ ಫೆ.17ರಂದು ಸುಪ್ರೀಂಕೋರ್ಟ್ ಅಣತಿಯ ಮೇರೆಗೆ ಎಫ್ಐಆರ್ ದಾಖಲಿಸಲಾಗಿತ್ತು. 
ಪ್ರಕರಣ ಬೆಳಕಿಗೆ ಬಂದು ಹಲವು ತಿಂಗಳುಗಳೇ ಕಳೆದರೂ ಆರೋಪಿ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸಲು ಸಾಧ್ಯವಾಗಿರಲಿಲ್ಲ. ಇಂದು ಬೆಳಿಗ್ಗೆ ಗಾಯತ್ರಿ ಪ್ರಜಾಪತಿಯವರನ್ನು ಬಂಧನಕ್ಕೊಳಪಡಿಸಲಾಗಿತ್ತು. ಬಂಧನಕ್ಕೊಳಪಡಿಸಿದ ಬಳಿಕ ಪ್ರಜಾಪತಿಯವರನ್ನು ಪೋಸ್ಕೋ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಲಯ ಪ್ರಜಾಪತಿಯವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೊಳಪಡಿಸಿದೆ. ಇದಲ್ಲದೆ, ಪ್ರಜಾಪತಿಗೆ ತಲೆಮರೆಸಿಕೊಳ್ಳಲು ಸಹಾಯ ಮಾಡಿದ್ದ ಮೂವರು ಸಹವರ್ತಿಗಳನ್ನೂ ಪೊಲೀಸರು ಬಂಧಿಸಿದ್ದು, ಪ್ರಕರಣ ಬೇಧಿಸುವಲ್ಲಿ ಮಹತ್ವದ ಸುಳಿವು ದೊರೆತಿದೆ ಎಂದು ಮೂಲಗಳು ತಿಳಿಸಿವೆ. 
ನ್ಯಾಯಾಂಗ ಬಂಧನಕ್ಕೊಳಪಡಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಪಿ ಗಾಯತ್ರಿ ಪ್ರಜಾಪತಿಯವರು, ನಾನು ನಿರಪರಾಧಿ, ನನ್ನ ವಿರುದ್ಧ ಪಿತೂರಿ ನಡೆಸಲಾಗಿದೆ. ಪ್ರಕರಣ ಸಂಬಂಧ ಮಂಪರು ಪರೀಕ್ಷೆಗೆ ನಾನು ಸಿದ್ಧನಿದ್ದೇನೆ. ಆರೋಪ ಮಾಡುತ್ತಿರುವ ಮಹಿಳೆಯನ್ನೂ ಮಂಪರು ಪರೀಕ್ಷೆಗೊಳಪಡಿಸಿ. ದೇಶದ ನ್ಯಾಯಾಂಗ ವ್ಯವಸ್ಥೆ ಮೇಲೆ ನನಗೆ ಸಂಪೂರ್ಣ ನಂಬಿಕೆಯಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT