ಕೇಂದ್ರ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್ 
ದೇಶ

ಕೇಜ್ರಿವಾಲ್ ಮಾನಸಿಕ ಸ್ಥಿರತೆ ಕಳೆದುಕೊಂಡಿದ್ದಾರೆ: ಹರ್ಸಿಮ್ರತ್ ಕೌರ್

ಇತ್ತೀಚಿನ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಕಳಪೆ ಪ್ರದರ್ಶನಕ್ಕೆ ಎಲೆಕ್ಟ್ರಾನಿಕ್...

ನವದೆಹಲಿ: ಇತ್ತೀಚಿನ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಕಳಪೆ ಪ್ರದರ್ಶನಕ್ಕೆ ಎಲೆಕ್ಟ್ರಾನಿಕ್ ಮತಯಂತ್ರದ ದೋಷ ಕಾರಣ ಎಂದು ಆರೋಪ ಮಾಡಿರುವ ಅರವಿಂದ್ ಕೇಜ್ರಿವಾಲ್ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವೆ ಹರ್ಸಿಮ್ರತ್ ಕೌರ್ ಬಾದಲ್, ಕೇಜ್ರಿವಾಲ್ ಅವರು ಮಾನಸಿಕ ಸ್ಥಿರತೆ ಕಳೆದುಕೊಂಡಿದ್ದಾರೆ ಎಂದು ಹೇಳಿದರು.
ಕೇಜ್ರಿವಾಲ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ದೆಹಲಿಯಲ್ಲಿ ಅವರಿಗೆ 67 ಸೀಟುಗಳು ಬಂದಾಗ ಆಗ ಎಲ್ಲವೂ ಚೆನ್ನಾಗಿದ್ದವು. ಈಗ ಪಂಜಾಬ್ ನಲ್ಲಿ ಆದ ಸೋಲನ್ನು ಅವರಿಂದ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಅನಗತ್ಯ ತೊಂದರೆ ಸೃಷ್ಟಿಸುತ್ತಿದ್ದಾರೆ ಎಂದರು.
ಎಲೆಕ್ಟ್ರಾನಿಕ್ ವೋಟಿಂಗ್ ಮೆಷಿನ್ ಮತ್ತು ಬ್ಯಾಲಟ್ ಬಗ್ಗೆ ಆರೋಪ ಹೊರಿಸುವ ಬದಲು ಅರವಿಂದ ಕೇಜ್ರಿವಾಲ್ ಅವರು ರಾಜಧಾನಿ ದೆಹಲಿಯ ಅಭಿವೃದ್ಧಿ ಕಡೆ ಗಮನಹರಿಸಲಿ ಎಂದರು.
ಅವರು ಯಾವಾಗಲೂ ಸುಳ್ಳು ಹೇಳಿಕೊಂಡು ಬಂದಿದ್ದಾರೆ. ಅವರಿಗೆ ಜನರು ಏಕೆ ಬೆಂಬಲ ನೀಡಬೇಕು ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದರು.
ಪಂಜಾಬ್ ನಲ್ಲಿ ಶಿರೋಮಣಿ ಅಕಾಲಿದಳದ ಸೋಲಿನ ಬಗ್ಗೆ ಅವರು ಅಷ್ಟೊಂದು ಪ್ರಾಮುಖ್ಯತೆ ನೀಡಲಿಲ್ಲ. ಚುನಾವಣೆಯಲ್ಲಿ ಸೋತರೂ ಕೂಡ ಕೊನೆಗೂ ನಮಗೆ ಶೇಕಡಾ 31ರಷ್ಟು ಮತ ಸಿಕ್ಕಿದೆ.ಇದರರ್ಥ ಪಂಜಾಬ್ ನ ಜನತೆ ನಮ್ಮ ಮೇಲೆ ಇನ್ನೂ ನಂಬಿಕೆ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT