ರಾಜ್ ಬಬ್ಬರ್ 
ದೇಶ

ಉ.ಪ್ರ ಕಾಂಗ್ರೆಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ?

ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ.

ನವದೆಹಲಿ: ಉತ್ತರ ಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಕಳಪೆ ಪ್ರದರ್ಶನ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜ್ ಬಬ್ಬರ್ ರಾಜೀನಾಮೆ ನೀಡಲು ಮುಂದಾಗಿದ್ದಾರೆ. 
ರಾಜೀನಾಮೆ ನೀಡುವುದರ ಬಗ್ಗೆ ರಾಜ್ ಬಬ್ಬರ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಉತ್ತರ ಪ್ರದೇಶದಲ್ಲಿ ಉಂಟಾದ ಸೋಲಿಗೆ ನಾನೇ ಹೊಣೆ ಹೊರುತ್ತೇನೆ ಎಂದು ಹೇಳಿದ್ದಾರೆ. ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಶ್ರಮ ವಹಿಸಿದರೂ, ನಿರೀಕ್ಷೆಗೆ ತಕ್ಕಂತೆ ಕಾಂಗ್ರೆಸ್ ಕೆಲಸ ಮಾಡಲಿಲ್ಲ ಎಂದು ರಾಜ್ ಬಬ್ಬರ್ ಹೇಳಿದ್ದಾರೆ. ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ ಬಬ್ಬರ್ ಬಿಜೆಪಿ ಹಣ ಮತ್ತು ತೋಳ್ಬಲದಿಂದ ಗೋವಾ ಹಾಗೂ ಮಣಿಪುರದಲ್ಲಿ ಅಧಿಕಾರ ಹಿಡಿದಿದೆ ಎಂದು ಆರೋಪಿಸಿದ್ದಾರೆ. 
ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿದ್ದ ಕಾಂಗ್ರೆಸ್ ಪಕ್ಷ 403 ಸ್ಥಾನಗಳಲ್ಲಿ ಕೇವಲ 7 ಸ್ಥಾನಗಳನ್ನಷ್ಟೇ ಗೆದ್ದಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT