ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ 
ದೇಶ

ಇವಿಎಂನಲ್ಲಿ ಬಿಜೆಪಿ ಗೋಲ್'ಮಾಲ್ ಆರೋಪ: ನ್ಯಾಯಾಲಯದ ಮೆಟ್ಟಿಲೇರಿದ ಮಾಯಾವತಿ

ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ (ವಿದ್ಯುನ್ಮಾನ ಮತಯಂತ್ರ) ದೋಷದಿಂದಾಗಿ ಬಿಜೆಪಿ ಭಾರೀ ಗೋಲ್ ಮಾಲ್ ನಡೆಸಿದೆ ಎಂದು ಆರೋಪಿಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ನ್ಯಾಯಾಲಯದ ಮೆಟ್ಟಿಲೇರಲು ಬುಧವಾರ...

ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಇವಿಎಂ (ವಿದ್ಯುನ್ಮಾನ ಮತಯಂತ್ರ) ದೋಷದಿಂದಾಗಿ ಬಿಜೆಪಿ ಭಾರೀ ಗೋಲ್ ಮಾಲ್ ನಡೆಸಿದೆ ಎಂದು ಆರೋಪಿಸಿರುವ ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿಯವರು ನ್ಯಾಯಾಲಯದ ಮೆಟ್ಟಿಲೇರಲು ಬುಧವಾರ ನಿರ್ಧಾರ ಕೈಗೊಂಡಿದ್ದಾರೆ. 
ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿ ಅಪ್ರಮಾಣಿಕ ಹಾಗೂ ಮೋಸದಿಂದ ಗೆಲವು ಸಾಧಿಸಿದೆ ಎಂದು ಹೇಳಿದ್ದಾರೆ. 
ಚುನಾವಣಾ ಆಯೋಗದ ಬಳಿ ದೂರು ದಾಖಲಿಸಿದ್ದೆವು. ಚುನಾವಣೆ ಆಯೋಗದಿಂದ ಸೂಕ್ತ ರೀತಿಯ ಪ್ರತಿಕ್ರಿಯೆಗಳು ಬಂದಿರಲಿಲ್ಲ. ದೂರು ದಾಖಲಿಸಿದ ಕೂಡಲೇ ಮಾರ್ಚ್ 11 ರಂದು ಚುನಾವಣೆಯ ಫಲಿತಾಂಶವನ್ನು ಪ್ರಕಟಿಸಲಾಗಿತ್ತು. ಹೀಗಾಗಿ ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡುವ ಸಲುವಾಗಿ ನಾವು ನ್ಯಾಯಾಲಯ ಮೆಟ್ಟಿಲೇರಲು ನಿರ್ಧಾರ ಕೈಗೊಂಡಿದ್ದೇವೆಂದು ತಿಳಿಸಿದ್ದಾರೆ. 
ಬಿಜೆಪಿ ಮೋಸವನ್ನು ಬಹಿರಂಗಪಡಿಸುವ ಸಲುವಾಗಿ ನಮ್ಮ ಪಕ್ಷ ಪ್ರತಿಭಟನೆ ನಡೆಸಲು ತೀರ್ಮಾನಿಸಿದೆ. ಉತ್ತರಪ್ರದೇಶದ ಜಿಲ್ಲಾ ಹಾಗೂ ರಾಜ್ಯದ ಪ್ರಧಾನಕಚೇರಿಗಳಲ್ಲಿ ಪ್ರಜಾಪ್ರಭುತ್ವವನ್ನು ಹತ್ಯೆ ಮಾಡಿದ ದಿನದಂದೇ ಪ್ರತೀ ತಿಂಗಳ 11 ತಾರೀಖಿನಂದು ಕರಾಳ ದಿನವನ್ನು ಆಚರಿಸಲಾಗುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಪಶ್ಚಿಮ ಬಂಗಾಳ: ಇಬ್ಬರಿಗೆ ನಿಪಾ ವೈರಸ್ ಪಾಸಿಟಿವ್, ನರ್ಸ್‌ಗಳ ಸ್ಥಿತಿ ಗಂಭೀರ

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

SCROLL FOR NEXT