ಝಾಕಿರ್ ನಾಯ್ಕ್ 
ದೇಶ

ದೇಶದ ಸಾರ್ವಭೌಮತ್ವ ರಕ್ಷಣೆಗಾಗಿ ಝಾಕಿರ್ ನಾಯ್ಕ್ ಸಂಸ್ಥೆಗೆ ನಿಷೇಧ: ಕೇಂದ್ರದ ನಿರ್ಧಾರ ಎತ್ತಿಹಿಡಿದ "ಹೈ"

ದೇಶದ ಸಾರ್ವಭೌಮತ್ವ ರಕ್ಷಣೆಗಾಗಿ ಕೇಂದ್ರ ಸರ್ಕಾರ ವಿವಾದಿತ ಝಾಕಿರ್ ನಾಯ್ಕ್ ನೇತೃತ್ವದ ಎನ್'ಜಿಎ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಮೇಲೆ ನಿಷೇಧ ಹೇರಿದೆ ಎಂದು ದೆಹಲಿ ಹೈಕೋರ್ಟ್...

ನವದೆಹಲಿ: ದೇಶದ ಸಾರ್ವಭೌಮತ್ವ ರಕ್ಷಣೆಗಾಗಿ ಕೇಂದ್ರ ಸರ್ಕಾರ ವಿವಾದಿತ ಝಾಕಿರ್ ನಾಯ್ಕ್ ನೇತೃತ್ವದ ಎನ್'ಜಿಎ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಮೇಲೆ ನಿಷೇಧ ಹೇರಿದೆ ಎಂದು ದೆಹಲಿ ಹೈಕೋರ್ಟ್ ಗುರುವಾರ ಹೇಳಿದೆ. 
ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಮೇಲೆ ಕೇಂದ್ರ ಸರ್ಕಾರ ನಿಷೇಧ ಹೇರಿರುವ ಕುರಿತಂತೆ ಈ ಹಿಂದೆ ಝಾಕಿರ್ ನಾಯ್ಕ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಅರ್ಜಿಯನ್ನು ಇಂದು ಪರಿಶೀಲಿಸಿರುವ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ ನಿರ್ಧಾರವನ್ನು ಎತ್ತಿಹಿಡಿದಿದೆ. 
ದೇಶದ ಸಾರ್ವಭೌಮತ್ವವನ್ನು ಕಾಪಾಡುವ ಸಲುವಾಗಿ ಕೇಂದ್ರ ಸರ್ಕಾರ ನಿಷೇಧ ನಿರ್ಧಾರವನ್ನು ಕೈಗೊಂಡಿದೆ. ಎನ್ ಜಿಎ ಸಂಸ್ಥೆ ಮೇಲೆ ನಿಷೇಧ ಹೇರುವ ಕುರಿತಂತೆ ವಿದೇಶಾಂಗ ಸಚಿವಾಲಯದ ಬಳಿ ಸಾಕಷ್ಟು ಸಾಕ್ಷ್ಯಾಧಾರಗಳಿವೆ ಎಂದು ಹೇಳಿದೆ. 
ಇಸ್ಲಾಂ ಧರ್ಮ ಪ್ರಚಾರಕ ವಿವಾದಿತ ಝಾಕಿರ್ ನಾಯ್ಕ್ ನೇತೃತ್ವದ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ ಸಂಸ್ಥೆಯನ್ನು ನಿಷೇಧಿತ ಸಂಘಟನೆ ಎಂದುಪ ಘೋಷಿಸುವಂತೆ ಕಳೆದ ವರ್ಷ ಅಕ್ಟೋಬರ್ ತಿಂಗಳಿನಲ್ಲಿ ಕೇಂದ್ರ ಗೃಹ ಸಚಿವಾಲಯವು ಸಂಪುಟ ಸಭೆಗೆ ಟಿಪ್ಪಣಿ ಕಳುಹಿಸಿತ್ತು. ವಿದೇಶಿ ದೇಣಿಗೆ ಪಡೆಯುವ ಪರವಾನಗಿ ರದ್ದುಗೊಳಿಸುವ ಪ್ರಕ್ರಿಯೆಯನ್ನು ಇದೇ ತಿಂಗಳಿನಲ್ಲಿಯೇ ಸಚಿವಾಲಯ ಕೈಗೆತ್ತಿಕೊಂಡಿತ್ತು. 
ಝಾಕಿರ್ ನಾಯಕ್ ನೇತೃತ್ವದ ಎನ್ ಜಿಒದಲ್ಲಿ ಸರಣಿ ಅಕ್ರಮಗಳು ನಡೆಯುತ್ತಿರುವುದನ್ನು ಹಲವು ತನಿಖಾ ಸಂಸ್ಥೆಗಳು ಪತ್ತೆ ಹಚ್ಚಿದ ಬಳಿಕ ಈ ಕೇಂದ್ರ ಸರ್ಕಾರ ಈ ಕ್ರಮಕ್ಕೆ ಮುಂದಾಗಿತ್ತು. ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿದೆ ಎಂಬ ಆರೋಪವಿರುವ ಪೀಸ್ ಟಿ.ವಿ ಜೆತೆ ಝಾಕೀರ್ ಸಂಸ್ಥೆ ನಂಟು ಹೊಂದಿದೆ ಎಂಬ ಆರೋಪಗಳೂ ಕೇಳಿಬಂದಿತ್ತು. ಇದಲ್ಲದೆ, ಝಾಕಿರ್ ನಾಯ್ಕ್ ಅವರ ಬೋಧನೆಯಿಂದ ಪ್ರೇರಿತರಾಗಿದ್ದೇವೆಂದು ಕೆಲ ಭಯೋತ್ಪಾದಕರೂ ಕೂಡ ಹೇಳಿಕೊಂಡಿದ್ದರು. ನಂತರ ಝಾಕೀರ್ ಪ್ರಚೋದನಾಕಾರಿ ಭಾಷಣಗಳ ಮೇಲೆ ಅಧಿಕಾರಿಗಳು ನಿಗಾ ಇಟ್ಟಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT