ಸಂಜಯ್ 
ದೇಶ

ಭಯೋತ್ಪಾದನೆ ಖಂಡಿಸಿದ್ದ ಮುಸ್ಲಿಂ ಗಾಯಕಿ ವಿರುದ್ಧ ಫತ್ವಾ: ಶಿವಸೇನೆ ಆಕ್ರೋಶ

ಭಯೋತ್ಪಾದನಾ ಕೃತ್ಯಗಳ ವಿರುದ್ಧ ಜನಜಾಗೃತಿ ಮೂಡಿಸುವ ಹಾಡುಗಳನ್ನು ಹಾಡುತ್ತಿದ್ದ 16 ವರ್ಷದ ಹರೆಯದ ಉದಯೋನ್ಮುಖ ಗಾಯಕಿ ನಹೀದ್ ಅಫ್ರಿನ್ ವಿರುದ್ಧ...

ಮುಂಬೈ: ಭಯೋತ್ಪಾದನಾ ಕೃತ್ಯಗಳ ವಿರುದ್ಧ ಜನಜಾಗೃತಿ ಮೂಡಿಸುವ ಹಾಡುಗಳನ್ನು ಹಾಡುತ್ತಿದ್ದ 16 ವರ್ಷದ ಹರೆಯದ ಉದಯೋನ್ಮುಖ ಗಾಯಕಿ ನಹೀದ್ ಅಫ್ರಿನ್ ವಿರುದ್ಧ ಅಸ್ಸಾಮಿನ 42 ಮೌಲ್ವಿಗಳು ಫತ್ವಾ ಹೊರಡಿಸಿರುವುದಕ್ಕೆ ಶಿವಸೇನೆ ಆಕ್ರೋಶ ವ್ಯಕ್ತಪಡಿಸಿದೆ. 
ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಮತ್ತು ದೇಶ ತಾಲಿಬಾಲಿಗಳ ಕೈಯಡಿಯಲ್ಲಿಲ್ಲ. ಮೌಲ್ವಿಗಳು ಯುವ ಪ್ರತಿಭೆ ವಿರುದ್ಧ ಫತ್ವ ಹೊರಡಿಸುವ ಮೂಲಕ ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿದ್ದಾರೆ ಎಂದು ಶಿವಸೇನೆ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ. 
ಅಸ್ಸಾಂನಲ್ಲಿ ಭಾರತೀಯ ಜನತಾ ಪಕ್ಷ(ಬಿಜೆಪಿ)ಅಧಿಕಾರದಲ್ಲಿದೆ. ಹೀಗಾಗಿ ಮೌಲ್ವಿಗಳು ತಿಳಿದುಕೊಳ್ಳಬೇಕು ಅಸ್ಸಾಂ ಭಾರತದಲ್ಲಿದೆ ಪಾಕಿಸ್ತಾನದಲ್ಲಲ್ಲ. ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನದ ಮೇಲಿ ತಾಲಿಬಾನಿಗಳ ಹಿಡಿತವಿರಬಹುದು. ಅದನ್ನು ಭಾರತದಲ್ಲೂ ಪ್ರಯೋಗಿಸಬಹುದು ಎಂದು ತಿಳಿಯಬೇಡಿ ಎಂದು ಹೇಳಿದ್ದಾರೆ. 
ಖಾಸಗಿ ಟಿವಿ ಚಾನೆಲ್ ವೊಂದು 2015ರಲ್ಲಿ ನಡೆಸಿದ್ದ ರಿಯಾಲಿಟಿ ಶೋನಲ್ಲಿ ಅಫ್ರಿನ್ ಮೊದಲ ರನ್ನರ್ ಅಪ್ ಆಗಿದ್ದರು. ಇಸಿಸ್ ಸೇರಿದಂತೆ ಹಲವು ಭಯೋತ್ಪಾದಕ ಸಂಘಟನೆಗಳು ನಡೆಸುತ್ತಿರುವ ಉಗ್ರವಾದದ ವಿರುದ್ಧದ ಗೀತೆಗಳನ್ನು ನಹೀದ್ ಅಫ್ರಿನ್ ಅವರು ಇತ್ತೀಚೆಗೆ ಹಾಡಿದ್ದರು. ಈ ಹಿನ್ನಲೆಯಲ್ಲಿ ಅಫ್ರಿನ್ ಸಾರ್ವಜನಿಕ ಸಂಗೀತ ಕಾರ್ಯಕ್ರಮ ನೀಡದಂತೆ ಅಸ್ಸಾಮಿನ 42 ಮೌಲ್ವಿಗಳು ಫತ್ವಾ ಹೊರಡಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT