ಬಿರೇನ್ ಸಿಂಗ್ 
ದೇಶ

ಮಣಿಪುರ ರಾಜವಂಶಸ್ಥರ ನೆರವು ಕೇಳಿದ ಸಿಎಂ

ರಾಜ್ಯದಲ್ಲಿ ಬುಡಕಟ್ಟು ಹಾಗೂ ಬುಡಕಟ್ಟೇತರ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವುದಕ್ಕೆ ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜವಂಶಸ್ಥರ ಸಹಾಯ ಕೇಳಿದ್ದಾರೆ.

ಇಂಫಾಲ: ರಾಜ್ಯದಲ್ಲಿ ಬುಡಕಟ್ಟು ಹಾಗೂ ಬುಡಕಟ್ಟೇತರ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವುದಕ್ಕೆ ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜವಂಶಸ್ಥರ ಸಹಾಯ ಕೇಳಿದ್ದಾರೆ. 
ಮುಖ್ಯಮಂತ್ರಿ ಬಿರೇನ್ ಸಿಂಗ್ ಗೆ ಅಗತ್ಯವಾಗಿ ಎಲ್ಲಾ ರೀತಿಯಲ್ಲೂ ಸಹಕರಿಸುವುದಾಗಿ ರಾಜವಂಶಸ್ಥ ಭರವಸೆ ನೀಡಿದ್ದಾರೆ. ಶಿಷ್ಟಾಚಾರವನ್ನು ಬದಿಗೊತ್ತಿ ಮುಖ್ಯಮಂತ್ರಿ ಬಿರೇನ್ ಸಿಂಗ್ ಇಂಫಾಲದಲ್ಲಿರುವ ಮಣಿಪುರದ ಅರಮನೆಗೆ ತೆರಳಿದ್ದರು. ರಾಜವಂಶಸ್ಥರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಸಿಎಂ ಬಿರೇನ್ ಸಿಂಗ್, ಬಡಕಟ್ಟು, ಬುಡಕಟ್ಟೇತರ ಸಮುದಾಯಗಳ ಜನರು ಒಂದೇ ಪೋಷಕರ ಮಕ್ಕಳಂತೆ ಜೀವಿಸುತ್ತಿದ್ದಾರೆ. ಬುಡಕಟ್ಟು ಜನರು ಹಿರಿಯ ಸಹೋದರರಾದರೆ ಬುಟಕಟ್ಟೇತರ ಜನರು ಕಿರಿಯ ಸಹೋದರರೆಂಬ ಭಾವನೆಯಲ್ಲಿದ್ದಾರೆ. ಮಣಿಪುರದಲ್ಲಿ ಹಿರಿಯರು ತಮ್ಮ ನಡುವೆ ಉಡುಗೊರೆಗಳನ್ನು ಪರಸ್ಪರ ಹಂಚಿಕೊಳ್ಳುವ ಆಚರಣೆಯಿದ್ದು, ಬುಡಕಟ್ಟು ಹಾಗೂ ಬುಡಕಟ್ಟೇತರ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುವುದು ರಾಜವಂಸ್ಥರಿಂದ ಸಾಧ್ಯವಿದೆ ಎಂದು ಬಿರೇನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT