ದಿಗ್ವಿಜಯ್ ಸಿಂಗ್ 
ದೇಶ

ಗೋವಾದಲ್ಲಿ ಕಾಂಗ್ರೆಸ್ ಸೋಲಿಗೆ ನನ್ನನ್ನು ಖಳನಾಯಕನಂತೆ ಬಿಂಬಿಸಲಾಗುತ್ತಿದೆ: ದಿಗ್ವಿಜಯ್ ಸಿಂಗ್

ಗೋವಾದಲ್ಲಿ ಕಾಂಗ್ರೆಸ್ ಸೋಲಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಬೇಸರ ವ್ಯಕ್ತ ಪಡಿಸಿದ್ದಾರೆ, ಈ ಸಂಬಂಧ ಟ್ವಿಟ್ಟರ್ ನಲ್ಲಿ ತಮ್ಮ ಅಸಮಾಧಾನ ಹೊರ ..

ಪಣಜಿ:  ಗೋವಾದಲ್ಲಿ ಕಾಂಗ್ರೆಸ್ ಸೋಲಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಬೇಸರ ವ್ಯಕ್ತ ಪಡಿಸಿದ್ದಾರೆ, ಈ ಸಂಬಂಧ ಟ್ವಿಟ್ಟರ್ ನಲ್ಲಿ ತಮ್ಮ ಅಸಮಾಧಾನ ಹೊರ ಹಾಕಿದ್ದಾರೆ.

ಗೋವಾದಲ್ಲಿ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳುವಂತೆ ನಾನು ನೀಡಿದ್ದ ಸಲಹೆಯನ್ನು ಒಪ್ಪಿಕೊಳ್ಳಲಿಲ್ಲ, ಹಾಗಾಗಿ ಗೋವಾದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ ಎಂದು ದಿಗ್ವಿಜಯ್ ಸಿಂಗ್ ಟ್ವಿಟ್ ಮಾಡಿದ್ದಾರೆ.

ಗೋವಾದಲ್ಲಿ ಕಾಂಗ್ರೆಸ್ ಸರ್ಕಾರ ರಚಿಸಲು ವಿಫಲವಾದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾಂಗ್ರೆಸ್ ನಾಯಕರು ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ದಿಗ್ವಿಜಯ್ ಸಿಂಗ್ ಅವರನ್ನು ಖಳನಾಯಕರಂತೆ ಬಿಂಬಿಸಲಾಗುತ್ತಿದೆ ಎಂದು ಟ್ವೀಟಿಸಿದ್ದಾರೆ. .

ಗೋವಾದ ಸ್ಥಳೀಯ ಪಕ್ಷಗಳಾದ ಬಾಬುಷ್ ನೇತೃತ್ವದ ಯುನೈಟೆಡ್ ಗೋವನ್ ಪಾರ್ಟಿ ಮತ್ತು ಗೋವಾ ಫಾರ್ವರ್ಡ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವಂತೆ ಸಲಹೆ ನೀಡಿದ್ದೆ. ಆದರೆ ರಾಷ್ಟ್ರೀಯ ನಾಯಕರು ಜಿಎಫ್​ಪಿಯೊಂದಿಗೆ ಮೈತ್ರಿ ಬೇಡ ಎಂದರು. ಜಿಎಫ್​ಇ ಚುನಾವಣೆಯಲ್ಲಿ 4 ರಲ್ಲಿ 3 ಸ್ಥಾನ ಪಡೆದಿತ್ತು. ನಾವು ಮೈತ್ರಿ ಮಾಡಿಕೊಂಡಿದ್ದರೆ 22 ಸದಸ್ಯ ಬಲದೊಂದಿಗೆ ಸುಲಭವಾಗಿ ಅಧಿಕಾರಕ್ಕೆ ಬರಬಹುದಿತ್ತು ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಭಾರತೀಯರು ಬಗ್ಗದೇ ಹೋದರೆ...": ಹತಾಶಗೊಂಡ ಟ್ರಂಪ್ ಸಲಹೆಗಾರನಿಂದ ನೇರಾನೇರ ಬೆದರಿಕೆ!

SCO summit: ಟ್ರಂಪ್ ಗೆ ಸೆಡ್ಡು; ಚೀನಾ, ರಷ್ಯಾ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಸಭೆಗೆ ಪ್ರಧಾನಿ ಮೋದಿ ಸಜ್ಜು; ದಿಗ್ಗಜರ ಸಮಾಗಮದ ಮೇಲೆ ಜಗತ್ತಿನ ಕಣ್ಣು!

BJP, RSS ನಡುವೆ ಭಿನ್ನಾಭಿಪ್ರಾಯ ಇರಬಹುದು, ಆದರೆ ಸಂಘರ್ಷ ಇಲ್ಲ: ಮೋಹನ್ ಭಾಗವತ್

ಧರ್ಮಸ್ಥಳ ಪ್ರಕರಣ: ದೂರುದಾರನ ಮಂಪರು ಪರೀಕ್ಷೆಗೆ ಸೌಜನ್ಯ ತಾಯಿ ಒತ್ತಾಯ; ಹೊಸ ದೂರು ದಾಖಲು!

News headlines 28-08-2025 | ಚಾಮುಂಡಿ ದೇವರು ಹಿಂದೂಗಳ ಆಸ್ತಿ ಅಲ್ಲ- DK Shivakumar; ಪ್ರಮೋದಾ ದೇವಿ ಒಡೆಯರ್ ಪ್ರತಿಕ್ರಿಯೆ ಏನು..?; ಬೀದರ್‌: ಭಾರಿ ಮಳೆ, ಹಲವು ಸೇತುವೆ ಬಂದ್; ಕಾಂಗ್ರೆಸ್ ಶಾಸಕ ವಿರೇಂದ್ರ ಪಪ್ಪಿ ಮತ್ತೆ ED ಕಸ್ಟಡಿಗೆ

SCROLL FOR NEXT