ಬಿಜೆಪಿ ನಾಯಕ ಗಿರಿರಾಜ್ ಸಿಂಗ್ 
ದೇಶ

ಗೋವಾ ಗೆಲುವಿಗೆ ಕಾರಣರಾದ 'ಪಕ್ಷದ ಕಾರ್ಯಕರ್ತ' ರಾಹುಲ್, ದಿಗ್ವಿಜಯ್'ಗೆ ಧನ್ಯವಾದ: ಗಿರಿರಾಜ್ ಸಿಂಗ್

ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡು ಗಾಯದ ನೋವಿನಲ್ಲಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಹೇಳಿಕೆಯೊಂದನ್ನು ನೀಡುವ ಮೂಲಕ ಗಾಯದ ಮೇಲೆ ಉಪ್ಪನ್ನು ಹಾಕಿದ್ದಾರೆ...

ಮುಂಬೈ: ಗೋವಾ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡು ಗಾಯದ ನೋವಿನಲ್ಲಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಅವರು ಹೇಳಿಕೆಯೊಂದನ್ನು ನೀಡುವ ಮೂಲಕ ಗಾಯದ ಮೇಲೆ ಉಪ್ಪನ್ನು ಹಾಕಿದ್ದಾರೆ. 
ಗೋವಾ ಗೆಲವು ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಗಿರಿರಾಜ್ ಸಿಂಗ್ ಅವರು, ಗೋವಾದಲ್ಲಿ ಬಹುಮತ ಸಾಬೀತು ಪಡಿಸಿರುವ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರಿದೆ ಅಭಿನಂದನೆಗಳು. ಮತ್ತು ನಮ್ಮ ಗೆಲವಿಗೆ ಕಾರಣರಾದ 'ಬಿಜೆಪಿ ಕಾರ್ಯಕರ್ತ'ರಾದ ರಾಹುಲ್ ಗಾಂಧಿ ಹಾಗೂ ದಿಗ್ವಿಜಯ್ ಸಿಂಗ್ ಅವರಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.
ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಕರೆಯಲಾಗಿದ್ದ ವಿಶೇಷ ಅಧಿವೇಶನದಲ್ಲಿ ಗೋವಾದ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ಬಹುಮತ ಸಾಬೀತು ಪಡಿಸುವಲ್ಲಿ ಯಶಸ್ವಿಯಾಗಿದ್ದರು. ವಿಶ್ವಾಸ ಮತಯಾಚನೆ ಪ್ರಕ್ರಿಯೆಯಲ್ಲಿ ಪರಿಕ್ಕರ್ ಅವರಿಗೆ 22 ಶಾಸಕರು ಬೆಂಬಲ ಸೂಚಿಸಿದ್ದರೆ, 16 ಶಾಸಕರು ವಿರೋಧ ವ್ಯಕ್ತಪಡಿಸಿದ್ದರು ಮತ್ತು ಓರ್ವ ಶಾಸಕರು ಮತದಾನ ಪ್ರಕ್ರಿಯೆಗೆ ಗೈರು ಹಾಜರಾಗಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT