ದಿಗ್ವಿಜಯ್ ಸಿಂಗ್ 
ದೇಶ

ಸರ್ಕಾರ ರಚನೆಗೆ ಹಕ್ಕು ಮಂಡಿಸದಂತೆ ನಮ್ಮನ್ನು ತಡೆದಿದ್ದು ದಿಗ್ವಿಜಯ್ ಸಿಂಗ್: ಗೋವಾ ಕಾಂಗ್ರೆಸ್

ಗೋವಾದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದ್ದರೂ ಸರ್ಕಾರ ರಚನೆ ಮಾಡಲು ವಿಫಲವಾಗುವುದಕ್ಕೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರೇ ನೇರ ಕಾರಣ ಎಂಬ ಆರೋಪ ಕೇಳಿಬಂದಿದೆ.

ಪಣಜಿ: ಗೋವಾದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗಳಿಸಿದ್ದರೂ ಸರ್ಕಾರ ರಚನೆ ಮಾಡಲು ವಿಫಲವಾಗುವುದಕ್ಕೆ ಗೋವಾ ಉಸ್ತುವಾರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರೇ ನೇರ ಕಾರಣ ಎಂಬ ಆರೋಪ ಕೇಳಿಬಂದಿದೆ. 
ದಿಗ್ವಿಜಯ್ ಸಿಂಗ್ ವಿರುದ್ಧ ಗೋವಾ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ  ಲೂಸಿನ್ಹೊ ಫೆಲರೊ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸದಂತೆ ನಮ್ಮನ್ನು ತಡೆದಿದ್ದು ದಿಗ್ವಿಜಯ್ ಸಿಂಗ್ ಅವರೇ ಎಂದು ಆರೋಪಿಸಿದ್ದಾರೆ. ಚುನಾವಣಾ ಫಲಿತಾಂಶ ಘೋಷಣೆಯಾಗುತ್ತಿದ್ದಂತೆಯೇ ರಾಜ್ಯಪಾಲರಿಗೆ ನೀಡಬೇಕಿದ್ದ ಸರ್ಕಾರ ರಚನೆಗೆ ಹಕ್ಕು ಮಂಡನೆ ಪತ್ರವನ್ನು ಸಿದ್ಧಪಡಿಸಿದ್ದೆವು. ಆದರೆ ಗೋವಾ ರಾಜ್ಯಪಾಲರೇ ಸರ್ಕಾರ ರಚಿಸುವಂತೆ ಅತಿ ದೊಡ್ಡ ಪಕ್ಷಕ್ಕೆ ಆಹ್ವಾನ ನೀಡುತ್ತಾರೆ. ಅಲ್ಲಿಯವರೆಗೂ ಸರ್ಕಾರ ರಚನೆಗೆ ಹಕ್ಕು ಮಂಡಿಸುವ ಪತ್ರವನ್ನು ಸಲ್ಲಿಸಬೇಡಿ ಎಂದು ದಿಗ್ವಿಜಯ್ ಸಿಂಗ್ ಹಾಗೂ ಗೋವಾ ಸ್ಕ್ರೀನಿಂಗ್ ಸಮಿತಿ ಅಧ್ಯಕ್ಷ ಕೆಸಿ ವೇಣುಗೋಪಾಲ್ ಸೂಚನೆ ನೀಡಿದ್ದರು. ದಿಗ್ವಿಜಯ್ ಸಿಂಗ್ ಮಾತನ್ನು ಕೇಳಿ ರಾಜ್ಯಪಾಲರಿಗೆ ಹಕ್ಕು ಮಂಡನೆ ಪತ್ರ ಸಲ್ಲಿಸಲಿಲ್ಲ. ಪರಿಣಾಮ ಬಿಜೆಪಿ ಸರ್ಕಾರ ರಚಿಸುವುದಕ್ಕೆ ಸಾಧ್ಯವಾಯಿತು ಎಂದು ಲೂಸಿನ್ಹೊ ಫೆಲರೊ ಹೇಳಿದ್ದಾರೆ. 
ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಪಕ್ಷೇತರ ಶಾಸಕರು ನಮಗೆ ಬೆಂಬಲ ನೀಡಿದ್ದರು. ಮಾ.11 ರಂದು ರಾತ್ರಿ ನಮ್ಮ ಬಳಿ 21 ಶಾಸಕರ ಬೆಂಬಲವಿತ್ತು. ಆದರೆ ಅವರ ಸಹಿ ಇರಲಿಲ್ಲ. ತ್ವರಿತ ನಿರ್ಧಾರ ಕೈಗೊಳ್ಳುವ ಬದಲು ಚರ್ಚಿಸಿ ನಿರ್ಧಾರ ಕೈಗೊಳ್ಳುವಂತೆ ದಿಗ್ವಿಜಯ್ ಸಿಂಗ್ ಸೂಚಿಸಿದ್ದರು. ಒಟ್ಟಾರೆ ಗೋವಾದಲ್ಲಿ ಕಾಂಗ್ರೆಸ್ ಗೆ ಅಧಿಕಾರ ತಪ್ಪಲು ದಿಗ್ವಿಜಯ್ ಸಿಂಗ್ ಅವರೇ ಕಾರಣ ಎಂದು ಲೂಸಿನ್ಹೊ ಫೆಲರೊ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT