ಯೋಗಿ ಆದಿತ್ಯನಾಥ್ ಅವರ ಪೂರ್ವಾಶ್ರಮದ ತಂದೆ 
ದೇಶ

ಯೋಗಿ ಆದಿತ್ಯನಾಥ್ ಪೂರ್ವಾಶ್ರಮದ ಕುಟುಂಬದಲ್ಲಿ ಮನೆಮಾಡಿದ ಸಂತಸ

ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ...

ಪಂಚೂರ್(ಉತ್ತರಾಖಂಡ): ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ ಸ್ವೀಕರಿಸುತ್ತಿರುವುದಕ್ಕೆ ಅವರ ಪೂರ್ವಾಶ್ರಮದ ತಂದೆ ಹಾಗೂ ಕುಟುಂಬದವರು ಸಂತೋಷಗೊಂಡಿದ್ದಾರೆ.
''ಬಾಲ್ಯದಿಂದಲೂ ಅವರಿಗೆ ಉನ್ನತವಾದ ಉದ್ದೇಶ, ಗುರಿಯಿತ್ತು. ಜನರ ಸೇವೆ ಮಾಡಬೇಕೆಂಬ ಆಕಾಂಕ್ಷೆಯಿತ್ತು. ಇಂದು ಮುಖ್ಯಮಂತ್ರಿಯಾಗಿದ್ದಾರೆ. ನನಗೆ ಈ ಸಂದರ್ಭದಲ್ಲಿ ಸಂತೋಷ ಮತ್ತು ಹೆಮ್ಮೆಯಾಗುತ್ತಿದೆ. ಇದುವರೆಗೆ ಅವರು ತೆಗೆದುಕೊಂಡ ನಿರ್ಧಾರಗಳೆಲ್ಲವೂ ಸರಿಯಾಗಿದೆ. ನಾನು ಅವರ ಪರವಾಗಿ ನಿಲ್ಲುತ್ತೇನೆ. ನನಗೆ ಈಗ ಬಹಳ ಪುಳಕಿತವಾಗುತ್ತಿದೆ ಎಂದು ಆದಿತ್ಯನಾಥ್ ಅವರ ತಂದೆ ಆದಿತ್ಯನಾಥ್ ಎಎನ್ಐ ಸುದ್ದಿ ಸಂಸ್ಥೆಗೆ ಪ್ರತಿಕ್ರಿಯೆ ನೀಡಿದ್ದಾರೆ.
ಆದಿತ್ಯನಾಥ್ ಅವರ ಪೂರ್ವಾಶ್ರಮದ ಸೋದರಿ ಕೂಡ ಹರ್ಷ ವ್ಯಕ್ತಪಡಿಸಿದ್ದು ತಮ್ಮ ಸೋದರನಿಗೆ ಶುಭಾಶಯ ತಿಳಿಸಿದ್ದಾರೆ. ನಾವು ನಿನ್ನೆಯಿಂದ ಟಿವಿ ಮುಂದೆ ಕುಳಿತಿದ್ದೇವೆ. ಪಟಾಕಿಗಳನ್ನು ಸಿಡಿಸಿ, ಸಿಹಿತಿಂಡಿ ಹಂಚಿ ಸಂತೋಷಪಟ್ಟಿದ್ದೇವೆ. ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವುದನ್ನು ಎದುರು ನೋಡುತ್ತಿದ್ದೇವೆ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT