ಹಝ್ರತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೈಯದ್ ಅಸಿಫ್ ನಿಜಾಮಿ ಮತ್ತು ಅವರ ಸೋದರಳಿಯ ನಜೀಮ್ ಅಲಿ ನಿಜಾಮಿ 
ದೇಶ

ಭಾರತಕ್ಕೆ ಬಂದಿಳಿದ ನಾಪತ್ತೆಯಾಗಿದ್ದ ಮುಸ್ಲಿಂ ಮೌಲ್ವಿಗಳು

ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಇಬ್ಬರು ಮುಸ್ಲಿಂ ಮೌಲ್ವಿಗಳು ಸೋಮವಾರ ಭಾರತಕ್ಕೆ ಬಂದಿಳಿದಿದ್ದಾರೆ...

ನವದೆಹಲಿ: ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಇಬ್ಬರು ಮುಸ್ಲಿಂ ಮೌಲ್ವಿಗಳು ಸೋಮವಾರ ಭಾರತಕ್ಕೆ ಬಂದಿಳಿದಿದ್ದಾರೆ.
ಹಝ್ರತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೈಯದ್ ಅಸಿಫ್ ನಿಜಾಮಿ ಮತ್ತು ಅವರ ಸೋದರಳಿಯ ನಜೀಮ್ ಅಲಿ ನಿಜಾಮಿ ಅವರು ಇಂದು ಬೆಳಿಗ್ಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆಂದು ಮೂಲಗಳು ತಿಳಿಸಿವೆ. 
ಲಾಹೋರ್ ನಲ್ಲಿರುವ ಪ್ರಸಿದ್ಧ ದಾತ ದರ್ಬಾರ್ ದರ್ಗಾಕ್ಕೆ ಭೇಟಿನೀಡುವ ಸಲುವಾಗಿ ದೆಹಲಿಯ ಹಝ್ರತ್ ನಿಜಾಮುದ್ದೀನ್ ದರ್ಗಾದ ಇಬ್ಬರು ಸೂಫಿ ಧರ್ಮಗುರುಗಳು ಪಾಕಿಸ್ತಾನಕ್ಕೆ ಹೋಗಿದ್ದರು. ದರ್ಗಾದ ಮುಖ್ಯ ಧರ್ಮಗುರು ಆಸೀಫ್ ನಿಜಾಮಿ ಮತ್ತು ನಝೀಮ್ ನಿಜಾಮಿಯವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. 
ಲಾಹೋರ್ ನಿಂದ ಕರಾಚಿಗೆ ಇಬ್ಬರು ಧರ್ಮಗುರುಗಳು ವಿಮಾನ ಹಿಡಿಯಬೇಕಾಗಿತ್ತು. ಆಸೀಫ್ ಗೆ ಕರಾಚಿಗೆ ತೆರಳಲು ಅನುಮತಿ ನೀಡಲಾಗಿತ್ತು. ಆದರೆ, ಪ್ರಯಾಣ ದಾಖಲೆಯಲ್ಲಿನ ತಪ್ಪುಗಳಿಂದಾಗಿ ನಝೀಮ್ ಅವರನ್ನು ಲಾಹೋರ್ ನಲ್ಲಿಯೇ ತಡೆಯಲಾಗಿತ್ತು. ನಝೀಮ್ ಲಾಹೋರ್ ವಿಮಾನ ನಿಲ್ದಾಣದಿಂದ, ಆಸೀಫ್ ಕರಾಚಿಯಿಂದ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿತ್ತು. 
ಈ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ನಾಪತ್ತೆಯಾಗಿರುವ ಮೌಲ್ವಿಗಳು ಇಸಿಸ್ ವಶದಲ್ಲಿದ್ದಾರೆಂದು ಶಂಕಿಸಲಾಗಿತ್ತು. ನಿನ್ನೆಯಷ್ಟೇ ಸುಷ್ಮಾ ಸ್ವರಾಜ್ ಅವರು ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿದ್ದರು. ಇಬ್ಬರೂ ಮೌಲ್ವಿಗಳು ಸುರಕ್ಷಿತರಾಗಿದ್ದು, ಶೀಘ್ರದಲ್ಲಿಯೇ ಭಾರತಕ್ಕೆ ಬರುತ್ತಾರೆಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT