ಹಝ್ರತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೈಯದ್ ಅಸಿಫ್ ನಿಜಾಮಿ ಮತ್ತು ಅವರ ಸೋದರಳಿಯ ನಜೀಮ್ ಅಲಿ ನಿಜಾಮಿ 
ದೇಶ

ಭಾರತಕ್ಕೆ ಬಂದಿಳಿದ ನಾಪತ್ತೆಯಾಗಿದ್ದ ಮುಸ್ಲಿಂ ಮೌಲ್ವಿಗಳು

ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಇಬ್ಬರು ಮುಸ್ಲಿಂ ಮೌಲ್ವಿಗಳು ಸೋಮವಾರ ಭಾರತಕ್ಕೆ ಬಂದಿಳಿದಿದ್ದಾರೆ...

ನವದೆಹಲಿ: ಪಾಕಿಸ್ತಾನದಲ್ಲಿ ನಾಪತ್ತೆಯಾಗಿದ್ದ ಭಾರತೀಯ ಇಬ್ಬರು ಮುಸ್ಲಿಂ ಮೌಲ್ವಿಗಳು ಸೋಮವಾರ ಭಾರತಕ್ಕೆ ಬಂದಿಳಿದಿದ್ದಾರೆ.
ಹಝ್ರತ್ ನಿಜಾಮುದ್ದೀನ್ ದರ್ಗಾದ ಮುಖ್ಯಸ್ಥ ಸೈಯದ್ ಅಸಿಫ್ ನಿಜಾಮಿ ಮತ್ತು ಅವರ ಸೋದರಳಿಯ ನಜೀಮ್ ಅಲಿ ನಿಜಾಮಿ ಅವರು ಇಂದು ಬೆಳಿಗ್ಗೆ ದೆಹಲಿಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದಾರೆಂದು ಮೂಲಗಳು ತಿಳಿಸಿವೆ. 
ಲಾಹೋರ್ ನಲ್ಲಿರುವ ಪ್ರಸಿದ್ಧ ದಾತ ದರ್ಬಾರ್ ದರ್ಗಾಕ್ಕೆ ಭೇಟಿನೀಡುವ ಸಲುವಾಗಿ ದೆಹಲಿಯ ಹಝ್ರತ್ ನಿಜಾಮುದ್ದೀನ್ ದರ್ಗಾದ ಇಬ್ಬರು ಸೂಫಿ ಧರ್ಮಗುರುಗಳು ಪಾಕಿಸ್ತಾನಕ್ಕೆ ಹೋಗಿದ್ದರು. ದರ್ಗಾದ ಮುಖ್ಯ ಧರ್ಮಗುರು ಆಸೀಫ್ ನಿಜಾಮಿ ಮತ್ತು ನಝೀಮ್ ನಿಜಾಮಿಯವರು ಪಾಕಿಸ್ತಾನಕ್ಕೆ ಭೇಟಿ ನೀಡಿದ್ದರು. 
ಲಾಹೋರ್ ನಿಂದ ಕರಾಚಿಗೆ ಇಬ್ಬರು ಧರ್ಮಗುರುಗಳು ವಿಮಾನ ಹಿಡಿಯಬೇಕಾಗಿತ್ತು. ಆಸೀಫ್ ಗೆ ಕರಾಚಿಗೆ ತೆರಳಲು ಅನುಮತಿ ನೀಡಲಾಗಿತ್ತು. ಆದರೆ, ಪ್ರಯಾಣ ದಾಖಲೆಯಲ್ಲಿನ ತಪ್ಪುಗಳಿಂದಾಗಿ ನಝೀಮ್ ಅವರನ್ನು ಲಾಹೋರ್ ನಲ್ಲಿಯೇ ತಡೆಯಲಾಗಿತ್ತು. ನಝೀಮ್ ಲಾಹೋರ್ ವಿಮಾನ ನಿಲ್ದಾಣದಿಂದ, ಆಸೀಫ್ ಕರಾಚಿಯಿಂದ ನಾಪತ್ತೆಯಾಗಿದ್ದಾರೆಂದು ಹೇಳಲಾಗುತ್ತಿತ್ತು. 
ಈ ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ನಾಪತ್ತೆಯಾಗಿರುವ ಮೌಲ್ವಿಗಳು ಇಸಿಸ್ ವಶದಲ್ಲಿದ್ದಾರೆಂದು ಶಂಕಿಸಲಾಗಿತ್ತು. ನಿನ್ನೆಯಷ್ಟೇ ಸುಷ್ಮಾ ಸ್ವರಾಜ್ ಅವರು ಪ್ರಕರಣ ಸಂಬಂಧ ಸ್ಪಷ್ಟನೆ ನೀಡಿದ್ದರು. ಇಬ್ಬರೂ ಮೌಲ್ವಿಗಳು ಸುರಕ್ಷಿತರಾಗಿದ್ದು, ಶೀಘ್ರದಲ್ಲಿಯೇ ಭಾರತಕ್ಕೆ ಬರುತ್ತಾರೆಂದು ಹೇಳಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT