ಸಾಂದರ್ಭಿಕ ಚಿತ್ರ 
ದೇಶ

ದೇವರಿಗಾಗಿ ನಾಲಿಗೆ ಕತ್ತರಿಸಿಕೊಂಡ ಯುವಕ!

ದೇವರ ಆಶೀರ್ವಾದಕ್ಕಾಗಿ 19 ವರ್ಷದ ಯುವಕನೊಬ್ಬ ನಾಲಿಗೆಯನ್ನೇ ಕತ್ತರಿಸಿಕೊಂಡಿರುವ ವಿಲಕ್ಷಣ ಘಟನೆಯೊಂದು ಭುವನೇಶ್ವರದ ಕುಹುಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ...

ಭುವನೇಶ್ವರ: ದೇವರ ಆಶೀರ್ವಾದಕ್ಕಾಗಿ 19 ವರ್ಷದ ಯುವಕನೊಬ್ಬ ನಾಲಿಗೆಯನ್ನೇ ಕತ್ತರಿಸಿಕೊಂಡಿರುವ ವಿಲಕ್ಷಣ ಘಟನೆಯೊಂದು ಭುವನೇಶ್ವರದ ಕುಹುಡಿ ಗ್ರಾಮದಲ್ಲಿ ಭಾನುವಾರ ರಾತ್ರಿ ನಡೆದಿದೆ. 
ದೆಬಾ ತರಸ್ ನಾಲಿಗೆ ಕತ್ತರಿಸಿಕೊಂಡ ಯುವಕನೆಂದು ಹೇಳಲಾಗುತ್ತಿದೆ. ಖುರ್ದಾ ಜಿಲ್ಲೆಯ ನಿವಾಸಿಯಾಗಿರುವ ತರಸ್ ಕುಹುಡಿ ಕಾಲೇಜಿನಲ್ಲಿ ದ್ವಿತೀಯಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾನೆಂದು ಪೊಲೀಸರು ಹೇಳಿದ್ದಾರೆ. 
ನಿನ್ನೆ ಸಂದೆ ತರಸ್ ಚಾಂಡೇಶ್ವರ್ ಮಹಾದೇವನ ದೇವಸ್ಥಾನಕ್ಕೆ ಹೋಗಿದ್ದ. ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಇಂದು ಬೆಳಿಗ್ಗೆ ಕುಟುಂಬಸ್ಥರು ಹುಡುಕಾಟ ಆರಂಭಿಸಿದಾಗ ದೇವಸ್ಥಾನದ ಮುಂದೆ ತರಸ್ ರಕ್ತದ ಮಡುವಿನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. 
ಕೂಡಲೇ ಯುವಕನನ್ನು ತಂಗಿ ಸಮುದಾಯದ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿದೆ. ಪ್ರಸ್ತುತ ತರಸ್ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಯುವಕ ಚಾಕುವಿನಿಂದ ನಾಲಿಗೆಯನ್ನು ಕತ್ತರಿಸಿಕೊಂಡಿದ್ದಾನೆ. ಆದರೆ, ಸ್ಥಳದಲ್ಲಿ ಯಾವುದೇ ರೀತಿಯ ಚೂರಿಗಳು ಪತ್ತೆಯಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT