ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ರಾಮ ಹುಟ್ಟಿದ ಭೂಮಿಯಲ್ಲಿಯೇ ಮಂದಿರ ನಿರ್ಮಾಣ: ಸುಬ್ರಮಣಿಯನ್ ಸ್ವಾಮಿ

ರಾಮನ ಹುಟ್ಟಿದ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿ, ಸರಯು ನದಿ ಬಳಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಅಯೋಧ್ಯೆ ವಿವಾದವನ್ನು ಇತ್ಯರ್ಥಪಡಿಸಿ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ...

ನವದೆಹಲಿ: ರಾಮನ ಹುಟ್ಟಿದ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿ, ಸರಯು ನದಿ ಬಳಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಅಯೋಧ್ಯೆ ವಿವಾದವನ್ನು ಇತ್ಯರ್ಥಪಡಿಸಿ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 
ರಾಮ ಮಂದಿರ ನಿರ್ಮಾಣ ವಿವಾದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಂದಿರ ಹಾಗೂ ಮಸೀದಿ ನಿರ್ಮಾಣ ಮಾಡುವ ಕುರಿತಂತೆ ನಾವು ಸಿದ್ಧರಿದ್ದೇವೆ. ರಾಮ ಮಂದಿರವನ್ನು ರಾಮ ಹುಟ್ಟಿದ ಭೂಮಿಯಲ್ಲಿಯೇ ನಿರ್ಮಾಣ ಮಾಡಿ, ಸರಯು ನದಿ ಬಳಿ ಮಸೀದಿ ನಿರ್ಮಾಣ ಮಾಡುವ ಮೂಲಕ ವಿವಾದವನ್ನು ಇತ್ಯರ್ಥ ಮಾಡಬಹುದು ಎಂದು ಹೇಳಿದ್ದಾರೆ. 
ರಾಮ ಹುಟ್ಟಿದ ಭೂಮಿಯಲ್ಲಿಯೇ ರಾಮನ ದೇಗುಲವನ್ನು ನಿರ್ಮಾಣ ಮಾಡಬೇಕು. ರಾಮ ಹುಟ್ಟಿದ ಭೂಮಿಯನ್ನು ನಾವು ಬದಲು ಮಾಡಲು ಸಾಧ್ಯವಿಲ್ಲ. ಮಸೀದಿಯನ್ನು ನಾನು ಎಲ್ಲಿ ಬೇಕಾದರೂ ನಿರ್ಮಾಣ ಮಾಡಬಹುದು. ರಾಮನ ಜನ್ಮ ಭೂಮಿಯನ್ನು ರಾಮ ಮಂದಿರದ ವಶಕ್ಕೆ ನೀಡಬೇಕು. ಮಸೀದಿಯನ್ನು ಸರಯು ನದಿ ಬಳಿ ನಿರ್ಮಾಣ ಮಾಡಬೇಕೆಂಬುದು ನನ್ನ ಸಲಹೆಯಾಗಿದೆ ಎಂದು ತಿಳಿಸಿದ್ದಾರೆ. 
ರಾಮ ಮಂದಿರ ವಿವಾದ ಸಂಬಂಧ ಇಂದು ಆದೇಶ ನೀಡಿದ್ದ ಸುಪ್ರೀಂಕೋರ್ಟ್ ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿದ್ದು, ಸಂಧಾನದ ಮೂಲಕ ಮಾತ್ರ ವಿವಾದ ಇತ್ಯರ್ಥ ಸಾಧ್ಯ. ಹೀಗಾಗಿ ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಿಕೊಳ್ಳುವಂತೆ ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT