ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ರಾಮ ಹುಟ್ಟಿದ ಭೂಮಿಯಲ್ಲಿಯೇ ಮಂದಿರ ನಿರ್ಮಾಣ: ಸುಬ್ರಮಣಿಯನ್ ಸ್ವಾಮಿ

ರಾಮನ ಹುಟ್ಟಿದ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿ, ಸರಯು ನದಿ ಬಳಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಅಯೋಧ್ಯೆ ವಿವಾದವನ್ನು ಇತ್ಯರ್ಥಪಡಿಸಿ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ...

ನವದೆಹಲಿ: ರಾಮನ ಹುಟ್ಟಿದ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿ, ಸರಯು ನದಿ ಬಳಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಅಯೋಧ್ಯೆ ವಿವಾದವನ್ನು ಇತ್ಯರ್ಥಪಡಿಸಿ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 
ರಾಮ ಮಂದಿರ ನಿರ್ಮಾಣ ವಿವಾದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಂದಿರ ಹಾಗೂ ಮಸೀದಿ ನಿರ್ಮಾಣ ಮಾಡುವ ಕುರಿತಂತೆ ನಾವು ಸಿದ್ಧರಿದ್ದೇವೆ. ರಾಮ ಮಂದಿರವನ್ನು ರಾಮ ಹುಟ್ಟಿದ ಭೂಮಿಯಲ್ಲಿಯೇ ನಿರ್ಮಾಣ ಮಾಡಿ, ಸರಯು ನದಿ ಬಳಿ ಮಸೀದಿ ನಿರ್ಮಾಣ ಮಾಡುವ ಮೂಲಕ ವಿವಾದವನ್ನು ಇತ್ಯರ್ಥ ಮಾಡಬಹುದು ಎಂದು ಹೇಳಿದ್ದಾರೆ. 
ರಾಮ ಹುಟ್ಟಿದ ಭೂಮಿಯಲ್ಲಿಯೇ ರಾಮನ ದೇಗುಲವನ್ನು ನಿರ್ಮಾಣ ಮಾಡಬೇಕು. ರಾಮ ಹುಟ್ಟಿದ ಭೂಮಿಯನ್ನು ನಾವು ಬದಲು ಮಾಡಲು ಸಾಧ್ಯವಿಲ್ಲ. ಮಸೀದಿಯನ್ನು ನಾನು ಎಲ್ಲಿ ಬೇಕಾದರೂ ನಿರ್ಮಾಣ ಮಾಡಬಹುದು. ರಾಮನ ಜನ್ಮ ಭೂಮಿಯನ್ನು ರಾಮ ಮಂದಿರದ ವಶಕ್ಕೆ ನೀಡಬೇಕು. ಮಸೀದಿಯನ್ನು ಸರಯು ನದಿ ಬಳಿ ನಿರ್ಮಾಣ ಮಾಡಬೇಕೆಂಬುದು ನನ್ನ ಸಲಹೆಯಾಗಿದೆ ಎಂದು ತಿಳಿಸಿದ್ದಾರೆ. 
ರಾಮ ಮಂದಿರ ವಿವಾದ ಸಂಬಂಧ ಇಂದು ಆದೇಶ ನೀಡಿದ್ದ ಸುಪ್ರೀಂಕೋರ್ಟ್ ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿದ್ದು, ಸಂಧಾನದ ಮೂಲಕ ಮಾತ್ರ ವಿವಾದ ಇತ್ಯರ್ಥ ಸಾಧ್ಯ. ಹೀಗಾಗಿ ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಿಕೊಳ್ಳುವಂತೆ ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Watch| Traffic Fine ಗೆ ಶೇ.50 ರಷ್ಟು ರಿಯಾಯಿತಿ; ವಂಚಕರಿಂದ ಮೋಸಹೋದ ಟೆಕ್ಕಿ!; Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ SIT ದಾಳಿ; ಮೊಬೈಲ್ ವಶಕ್ಕೆ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT