ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ರಾಮ ಹುಟ್ಟಿದ ಭೂಮಿಯಲ್ಲಿಯೇ ಮಂದಿರ ನಿರ್ಮಾಣ: ಸುಬ್ರಮಣಿಯನ್ ಸ್ವಾಮಿ

ರಾಮನ ಹುಟ್ಟಿದ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿ, ಸರಯು ನದಿ ಬಳಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಅಯೋಧ್ಯೆ ವಿವಾದವನ್ನು ಇತ್ಯರ್ಥಪಡಿಸಿ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ...

ನವದೆಹಲಿ: ರಾಮನ ಹುಟ್ಟಿದ ಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಿ, ಸರಯು ನದಿ ಬಳಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಅನುಮತಿ ನೀಡುವ ಮೂಲಕ ಅಯೋಧ್ಯೆ ವಿವಾದವನ್ನು ಇತ್ಯರ್ಥಪಡಿಸಿ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 
ರಾಮ ಮಂದಿರ ನಿರ್ಮಾಣ ವಿವಾದ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಮಂದಿರ ಹಾಗೂ ಮಸೀದಿ ನಿರ್ಮಾಣ ಮಾಡುವ ಕುರಿತಂತೆ ನಾವು ಸಿದ್ಧರಿದ್ದೇವೆ. ರಾಮ ಮಂದಿರವನ್ನು ರಾಮ ಹುಟ್ಟಿದ ಭೂಮಿಯಲ್ಲಿಯೇ ನಿರ್ಮಾಣ ಮಾಡಿ, ಸರಯು ನದಿ ಬಳಿ ಮಸೀದಿ ನಿರ್ಮಾಣ ಮಾಡುವ ಮೂಲಕ ವಿವಾದವನ್ನು ಇತ್ಯರ್ಥ ಮಾಡಬಹುದು ಎಂದು ಹೇಳಿದ್ದಾರೆ. 
ರಾಮ ಹುಟ್ಟಿದ ಭೂಮಿಯಲ್ಲಿಯೇ ರಾಮನ ದೇಗುಲವನ್ನು ನಿರ್ಮಾಣ ಮಾಡಬೇಕು. ರಾಮ ಹುಟ್ಟಿದ ಭೂಮಿಯನ್ನು ನಾವು ಬದಲು ಮಾಡಲು ಸಾಧ್ಯವಿಲ್ಲ. ಮಸೀದಿಯನ್ನು ನಾನು ಎಲ್ಲಿ ಬೇಕಾದರೂ ನಿರ್ಮಾಣ ಮಾಡಬಹುದು. ರಾಮನ ಜನ್ಮ ಭೂಮಿಯನ್ನು ರಾಮ ಮಂದಿರದ ವಶಕ್ಕೆ ನೀಡಬೇಕು. ಮಸೀದಿಯನ್ನು ಸರಯು ನದಿ ಬಳಿ ನಿರ್ಮಾಣ ಮಾಡಬೇಕೆಂಬುದು ನನ್ನ ಸಲಹೆಯಾಗಿದೆ ಎಂದು ತಿಳಿಸಿದ್ದಾರೆ. 
ರಾಮ ಮಂದಿರ ವಿವಾದ ಸಂಬಂಧ ಇಂದು ಆದೇಶ ನೀಡಿದ್ದ ಸುಪ್ರೀಂಕೋರ್ಟ್ ಅಯೋಧ್ಯೆಯ ರಾಮ ಜನ್ಮ ಭೂಮಿ ವಿವಾದ ಧಾರ್ಮಿಕ ಮತ್ತು ಭಾವನಾತ್ಮಕ ವಿಚಾರವಾಗಿದ್ದು, ಸಂಧಾನದ ಮೂಲಕ ಮಾತ್ರ ವಿವಾದ ಇತ್ಯರ್ಥ ಸಾಧ್ಯ. ಹೀಗಾಗಿ ನ್ಯಾಯಾಲಯದ ಹೊರಗೆ ವಿವಾದ ಇತ್ಯರ್ಥಪಡಿಸಿಕೊಳ್ಳುವಂತೆ ಹೇಳಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT