ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಸಂಸತ್ ಕಲಾಪಕ್ಕೆ ಸಂಸದರ ಗೈರು ಹಾಜರು: ಪ್ರಧಾನಿ ಮೋದಿ ತೀವ್ರ ಅಸಮಾಧಾನ

: ಸಂಸತ್ ಕಲಾಪಕ್ಕೆ ಗೈರು ಹಾಜರಾಗುವ ಲೋಕಸಭೆ, ರಾಜ್ಯಸಭೆ ಸದಸ್ಯರ ಧೋರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು...

ನವದೆಹಲಿ: ಸಂಸತ್ ಕಲಾಪಕ್ಕೆ ಗೈರು ಹಾಜರಾಗುವ ಲೋಕಸಭೆ, ರಾಜ್ಯಸಭೆ ಸದಸ್ಯರ ಧೋರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಸೋಮವಾರ ರಾಜ್ಯಸಭೆಯಲ್ಲಿ ಹಲವು ಮಹತ್ವದ ವಿಷಯಗಳು ಚರ್ಚೆಯಾಗಬೇಕಿದ್ದು, ಆದರೆ, ಕೆಲ ಸಚಿವರು ಕಲಾಪದಲ್ಲಿ ಇಲ್ಲದಿದ್ದರಿಂದಾಗಿ ಚರ್ಚೆ ನಡೆದಿರಲಿಲ್ಲ. ಪ್ರಶ್ನೋತ್ತರ ವೇಳೆಯಲ್ಲಿ ನಿರ್ಮಲಾ ಸೀತಾರಾಮನ್, ಸಂಜೀವ್ ಬಾಲ್ಯನ್ ಮತ್ತಿತರರು ಮಾತ್ರ ಹಾಜರಿದ್ದರು. ಸಚಿವರ ಗೈರು ಹಾಜರಾತಿ ಕುರಿತಂತೆ ಕಾಂಗ್ರೆಸ್ ರಾಜ್ಯಸಭಾಧ್ಯಕ್ಷ ಹಮೀದ್ ಅನ್ಸಾರಿಗೆ ದೂರು ನೀಡಲಾಗಿತ್ತು. ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವರು, ಸಚಿವರ ಗೈರು ಅವರ ನಿರ್ಲಕ್ಷ್ಯತನವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದರು. 
ನವದೆಹಲಿಯಲ್ಲಿ ಇಂದು ನಡೆದ ಪಕ್ಷದ ಸಂಸದೀಯ ಸಭೆಯಲ್ಲಿ ಕಲಾಪ ಸಂದರ್ಭದಲ್ಲಿ ಸಂಸದರ ಗೈರುಹಾಜರಿ ಕುರಿತ ವಿಚಾರವನ್ನು ಚರ್ಚಿಸಲಾಗಿದೆ. ಈ ವೇಳೆ ಪ್ರಧಾನಿ ಮೋದಿಯವರು ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆಂದು ಹೇಳಲಾಗುತ್ತಿದೆ. 
ಈ ವೇಳೆ ಸಂಸದರಿಗೆ ಎಚ್ಚರಿಕೆ ನೀಡಿರುವ ಅವರು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಯಾರಾದರೂ ಸಂಸದರು ಯಾವುದೇ ಕಾರಣಗಳನ್ನೂ ನೀಡದೆಯೇ ಗೈರು ಹಾಜರಾಗಿರುವುದು ಕಂಡುಬಂದರೆ, ನಾನೇ ವೈಯಕ್ತಿಕವಾಗಿ ಅವರಿಗೆ ಕರೆ ಮಾಡಿ ಸ್ಪಷ್ಟನೆ ಕೇಳುತ್ತೇನೆ. ಚುನಾವಣೆಯಲ್ಲಿ ಗೆಲವು ಸಾಧಿಸಲು ನಾನು ಸಹಾಯ ಮಾಡಬಲ್ಲೆ. ಆದರೆ, ಕಲಾಪಕ್ಕೆ ಗೈರು ಹಾಜರಾಗುವ ಸಂಸದರಿಗೆ ನಾನು ಯಾವುದೇ ಕಾರಣಕ್ಕೂ ಸಹಾಯವನ್ನು ಮಾಡುವುದಿಲ್ಲ ಎಂದು ಖಡಕ್ ಆದೇಶವನ್ನು ನೀಡಿದ್ದಾರೆಂದು ಮೂಲಗಳು ತಿಳಿಸಿವೆ. 
ಸಂಸದೀಯ ಸಭೆ ಬಳಿಕ ಹೇಳಿಕೆ ನೀಡಿರುವ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಅನಂತ್ ಕುಮಾರ್ ಅವರು, ಕಲಾಪ ನಡೆಯುವ ವೇಳೆ ಸಂಸದರು ಕಡ್ಡಾಯವಾಗಿ ಹಾಜರಿರಬೇಕೆಂದು ಪ್ರಧಾನಿ ಮೋದಿಯವರು ಹೇಳಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT