ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಸಂಸತ್ ಕಲಾಪಕ್ಕೆ ಸಂಸದರ ಗೈರು ಹಾಜರು: ಪ್ರಧಾನಿ ಮೋದಿ ತೀವ್ರ ಅಸಮಾಧಾನ

: ಸಂಸತ್ ಕಲಾಪಕ್ಕೆ ಗೈರು ಹಾಜರಾಗುವ ಲೋಕಸಭೆ, ರಾಜ್ಯಸಭೆ ಸದಸ್ಯರ ಧೋರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು...

ನವದೆಹಲಿ: ಸಂಸತ್ ಕಲಾಪಕ್ಕೆ ಗೈರು ಹಾಜರಾಗುವ ಲೋಕಸಭೆ, ರಾಜ್ಯಸಭೆ ಸದಸ್ಯರ ಧೋರಣೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. 
ಸೋಮವಾರ ರಾಜ್ಯಸಭೆಯಲ್ಲಿ ಹಲವು ಮಹತ್ವದ ವಿಷಯಗಳು ಚರ್ಚೆಯಾಗಬೇಕಿದ್ದು, ಆದರೆ, ಕೆಲ ಸಚಿವರು ಕಲಾಪದಲ್ಲಿ ಇಲ್ಲದಿದ್ದರಿಂದಾಗಿ ಚರ್ಚೆ ನಡೆದಿರಲಿಲ್ಲ. ಪ್ರಶ್ನೋತ್ತರ ವೇಳೆಯಲ್ಲಿ ನಿರ್ಮಲಾ ಸೀತಾರಾಮನ್, ಸಂಜೀವ್ ಬಾಲ್ಯನ್ ಮತ್ತಿತರರು ಮಾತ್ರ ಹಾಜರಿದ್ದರು. ಸಚಿವರ ಗೈರು ಹಾಜರಾತಿ ಕುರಿತಂತೆ ಕಾಂಗ್ರೆಸ್ ರಾಜ್ಯಸಭಾಧ್ಯಕ್ಷ ಹಮೀದ್ ಅನ್ಸಾರಿಗೆ ದೂರು ನೀಡಲಾಗಿತ್ತು. ಪ್ರತಿಪಕ್ಷ ನಾಯಕ ಗುಲಾಂ ನಬಿ ಆಜಾದ್ ಅವರು, ಸಚಿವರ ಗೈರು ಅವರ ನಿರ್ಲಕ್ಷ್ಯತನವನ್ನು ತೋರಿಸುತ್ತದೆ ಎಂದು ಆರೋಪಿಸಿದ್ದರು. 
ನವದೆಹಲಿಯಲ್ಲಿ ಇಂದು ನಡೆದ ಪಕ್ಷದ ಸಂಸದೀಯ ಸಭೆಯಲ್ಲಿ ಕಲಾಪ ಸಂದರ್ಭದಲ್ಲಿ ಸಂಸದರ ಗೈರುಹಾಜರಿ ಕುರಿತ ವಿಚಾರವನ್ನು ಚರ್ಚಿಸಲಾಗಿದೆ. ಈ ವೇಳೆ ಪ್ರಧಾನಿ ಮೋದಿಯವರು ತೀವ್ರ ಅಸಮಾಧಾನವನ್ನು ಹೊರಹಾಕಿದ್ದಾರೆಂದು ಹೇಳಲಾಗುತ್ತಿದೆ. 
ಈ ವೇಳೆ ಸಂಸದರಿಗೆ ಎಚ್ಚರಿಕೆ ನೀಡಿರುವ ಅವರು, ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ಯಾರಾದರೂ ಸಂಸದರು ಯಾವುದೇ ಕಾರಣಗಳನ್ನೂ ನೀಡದೆಯೇ ಗೈರು ಹಾಜರಾಗಿರುವುದು ಕಂಡುಬಂದರೆ, ನಾನೇ ವೈಯಕ್ತಿಕವಾಗಿ ಅವರಿಗೆ ಕರೆ ಮಾಡಿ ಸ್ಪಷ್ಟನೆ ಕೇಳುತ್ತೇನೆ. ಚುನಾವಣೆಯಲ್ಲಿ ಗೆಲವು ಸಾಧಿಸಲು ನಾನು ಸಹಾಯ ಮಾಡಬಲ್ಲೆ. ಆದರೆ, ಕಲಾಪಕ್ಕೆ ಗೈರು ಹಾಜರಾಗುವ ಸಂಸದರಿಗೆ ನಾನು ಯಾವುದೇ ಕಾರಣಕ್ಕೂ ಸಹಾಯವನ್ನು ಮಾಡುವುದಿಲ್ಲ ಎಂದು ಖಡಕ್ ಆದೇಶವನ್ನು ನೀಡಿದ್ದಾರೆಂದು ಮೂಲಗಳು ತಿಳಿಸಿವೆ. 
ಸಂಸದೀಯ ಸಭೆ ಬಳಿಕ ಹೇಳಿಕೆ ನೀಡಿರುವ ಸಂಸದೀಯ ವ್ಯವಹಾರಗಳ ಖಾತೆ ಸಚಿವ ಅನಂತ್ ಕುಮಾರ್ ಅವರು, ಕಲಾಪ ನಡೆಯುವ ವೇಳೆ ಸಂಸದರು ಕಡ್ಡಾಯವಾಗಿ ಹಾಜರಿರಬೇಕೆಂದು ಪ್ರಧಾನಿ ಮೋದಿಯವರು ಹೇಳಿದ್ದಾರೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT