ಯೋಗಿ ಆದಿತ್ಯನಾಥ್ 
ದೇಶ

ಸಿಎಂ ಯೋಗಿ ಹೊಸ ಆದೇಶ- ಸರ್ಕಾರಿ ನೌಕರರು ಕಚೇರಿಯಲ್ಲಿ ಪಾನ್, ಗುಟ್ಕಾ ತಿನ್ನುವಂತಿಲ್ಲ

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡುವಂತೆ....

ಲಖನೌ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡುವಂತೆ ಆದೇಶಿಸಿದ ಬೆನ್ನಲ್ಲೇ, ಸರ್ಕಾರಿ ನೌಕರರು ಕಚೇರಿಯಲ್ಲಿ ಪಾನ್ ಹಾಗೂ ಗುಟ್ಕಾ ತಿನ್ನುವಂತಿಲ್ಲ ಎಂದು ಬುಧವಾರ ಮತ್ತೊಂದು ಆದೇಶ ಹೊರಡಿಸಿದ್ದಾರೆ.
ಉತ್ತರ ಪ್ರದೇಶಾದ್ಯಂತ ಸರ್ಕಾರಿ ಕಚೇರಿಯಲ್ಲಿ ಪಾನ್ ಮತ್ತು ಗುಟ್ಕಾ ತಿಂದು ಗೋಡೆಯ ಮೇಲೆ ಉಗಿದು ಕೊಳಕು ಮಾಡುವುದು ಸಾಮಾನ್ಯವಾಗಿದ್ದು, ಇದರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡಿರುವ ಯೋಗಿ ಆದಿತ್ಯನಾಥ್ ಅವರು, ಕಚೇರಿ ಸಮಯದಲ್ಲಿ ನೌಕರರು ಪಾನ್, ಗುಟ್ಕಾ ಹಾಗೂ ಇತರೆ ಮಸಾಲಾಗಳನ್ನು ತಿನ್ನುವಂತಿಲ್ಲ ಎಂದು ಆದೇಶ ಹೊರಡಿಸಿದ್ದಾರೆ.
ಗುಟ್ಕಾ' ಮತ್ತು 'ಜರ್ದಾ' ದಂತಹ ತಂಬಾಕುಗಳು ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಇದರಿಂದಾಗಿ ಭಾರತದಲ್ಲಿ ಪ್ರತಿ ವರ್ಷ ಸುಮಾರು 0.9 ಮಿಲಿಯನ್ ಮಂದಿ ಸಾವನ್ನಪ್ಪುತ್ತಿದ್ದಾರೆ.
ಇಂದು ಬೆಳಗ್ಗೆಯಷ್ಟೆ ಬಿಜೆಪಿಯ ಚುನಾವಣೆ ಪ್ರಣಾಳಿಕೆಯನ್ನು ಗಮನದಲ್ಲಿಟ್ಟುಕೊಂಡು ಯೋಗಿ ಆದಿತ್ಯನಾಥ್ ಅವರು ರಾಜ್ಯದಲ್ಲಿರುವ ಕಸಾಯಿಖಾನೆಗಳನ್ನು ಬಂದ್ ಮಾಡುವಂತೆ ಮತ್ತು ಗೋವುಗಳ ಕಳ್ಳಸಾಗಣೆಯನ್ನು ನಿಷೇಧಿಸಿದೆ ಆದೇಶ ಹೊರಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT