ಸಲ್ಮಾನ್ ಖಾನ್ 
ದೇಶ

ಕೃಷ್ಣಮೃಗ ಬೇಟೆ ಪ್ರಕರಣ: ವಿಚಾರಣೆಯನ್ನು ಏಪ್ರಿಲ್ 1ಕ್ಕೆ ಮುಂದೂಡಿದ ಜೋಧ್ ಪುರ ನ್ಯಾಯಾಲಯ

ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಮತ್ತು ಇತರರ ವಿರುದ್ಧದ ವಿಚಾರಣೆಯನ್ನು ಜೋಧಪುರ...

ಮುಂಬೈ: ಕೃಷ್ಣಮೃಗ ಬೇಟೆ ಪ್ರಕರಣದಲ್ಲಿ ಸಲ್ಮಾನ್ ಖಾನ್ ಮತ್ತು ಇತರರ ವಿರುದ್ಧದ ವಿಚಾರಣೆಯನ್ನು ಜೋಧಪುರ ಕೋರ್ಟ್ ನ ಮುಖ್ಯ ನ್ಯಾಯಾಧೀಶ ಏಪ್ರಿಲ್ 1ಕ್ಕೆ ಮುಂದೂಡಿದ್ದಾರೆ.
ಈ ತಿಂಗಳ ಆರಂಭದಲ್ಲಿ ಮಹಿಳಾ ಕಾರ್ಯಕರ್ತೆ ಮತ್ತು ವಕೀಲೆ ಅಭ ಸಿಂಗ್ ಸಲ್ಮಾನ್ ಖಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಅವರು ಈ ವಿಷಯದಲ್ಲಿ ಮುಗ್ಧರಾಗಿದ್ದರೆ ಪ್ರತಿದಾವೆ ಸಲ್ಲಿಸಬೇಕು ಎಂದು ಹೇಳಿದರು.
ಸಲ್ಮಾನ್ ಖಾನ್ ಅವರು ಪದೇ ಪದೇ ನ್ಯಾಯಾಂಗವನ್ನು ತಮಾಷೆ ಮಾಡುತ್ತಿದ್ದಾರೆ. ಅವರು ಈ ಕೇಸಿನಲ್ಲಿ ನಿಜವಾಗಿಯೂ ತಪ್ಪಿತಸ್ಥ ಅಲ್ಲದಿದ್ದರೆ ಸುಳ್ಳು ಸಾಕ್ಷಿಯನ್ನು ದಾಖಲಿಸಬೇಕಿತ್ತು, ಅದು ಬಿಟ್ಟು ನ್ಯಾಯಾಲಯದ ಸಮಯವನ್ನು ಹಾಳು ಮಾಡುತ್ತಿದ್ದಾರೆ ಎಂದರು. ಸತ್ಯವೇನೆಂಬುದನ್ನು ನ್ಯಾಯಾಲಯ ತಿಳಿಸಬೇಕು ಎಂದು ಒತ್ತಾಯಿಸಿದರು.
1999ರಲ್ಲಿ ನಿರ್ದೇಶಕ ಸೂರಜ್ ಬರ್ಜತ್ಯ ಅವರ ಹಮ್ ಸಾತ್ ಸಾತ್ ಹೈ ಶೂಟಿಂಗ್ ಸಮಯದಲ್ಲಿ ಸಲ್ಮಾನ್ ಖಾನ್ ಸೈಫ್ ಆಲಿ ಖಾನ್, ನೀಲಂ, ಸೊನಾಲಿ ಬೇಂದ್ರೆ ಮತ್ತು ತಬು ಅವರ ಜೊತೆ ಸೇರಿ ಜೋಧ್ ಪುರದ ಕಂಕನಿ ಗ್ರಾಮದಲ್ಲಿ ಎರಡು ಕೃಷ್ಣಮೃಗಗಳನ್ನು ಬೇಟೆಯಾಡಿದ್ದರು ಎಂಬ ಆರೋಪವಿದೆ. 
ಸ್ಥಳೀಯ ಬಿಶ್ನೊಯಿ ಸಮುದಾಯದ ನಾಗರಿಕರ ಪ್ರತಿಭಟನೆ ಹಿನ್ನೆಲೆಯಲ್ಲಿ ಸಲ್ಮಾನ್ ಖಾನ್ ಮತ್ತು ಇತರ ನಟರ ವಿರುದ್ಧ ಕೇಸು ದಾಖಲಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ವಿವರ ಇಲ್ಲಿದೆ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

SCROLL FOR NEXT