ನರೇಂದ್ರ ಮೋದಿ-ಯೋಗಿ ಆದಿತ್ಯನಾಥ್ 
ದೇಶ

ಸಿಎಂ ಆದಿತ್ಯನಾಥ್ ರಿಂದ ಯಾವುದೇ ನೆರವು ಕೇಳಬೇಡಿ: ಉ.ಪ್ರ ಸಂಸದರಿಗೆ ಮೋದಿ ಖಡಕ್ ಎಚ್ಚರಿಕೆ

ತಮಗೆ ಬೇಕಾದ ಅಧಿಕಾರಿಗಳ ವರ್ಗಾವಣೆ, ನೇಮಕಾತಿಗಳಿಗಾಗಿ ಸಿಎಂ ಯೋಗಿ ಆದಿತ್ಯನಾಥ್ ಅವರಿಂದ ನೆರವನ್ನು ಕೇಳಬಾರದು ಎಂದು ಉತ್ತರ ಪ್ರದೇಶದ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ತಮಗೆ ಬೇಕಾದ ಅಧಿಕಾರಿಗಳ ವರ್ಗಾವಣೆ, ನೇಮಕಾತಿಗಳಿಗಾಗಿ ಸಿಎಂ ಯೋಗಿ ಆದಿತ್ಯನಾಥ್ ಅವರಿಂದ ನೆರವನ್ನು ಕೇಳಬಾರದು ಎಂದು ಉತ್ತರ ಪ್ರದೇಶದ ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಎಚ್ಚರಿಕೆ ನೀಡಿದ್ದಾರೆ. 
ಬೆಳಗಿನ ಉಪಹಾರದ ವೇಳೆ ಉತ್ತರ ಪ್ರದೇಶ ಸಂಸದರೊಂದಿಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದಲ್ಲಿ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸುವುದಕ್ಕೆ ನೆರವಾಗಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಅಷ್ಟೇ ಅಲ್ಲದೇ ಯೋಗಿ ಆದಿತ್ಯನಾಥ್ ಅವರ ಆಡಳಿತದ ಲಕ್ಷ್ಯ ಸುರಾಜ್ಯವನ್ನು ನೀಡುವತ್ತ ಮಾತ್ರ ಕೇಂದ್ರೀಕೃತವಾಗಿರಬೇಕು ಎಂದಿರುವ ಪ್ರಧಾನಿ, ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಶಾಸಕರೊಂದಿಗೆ ಜೊತೆಗೂಡಿ ಕೆಲಸ ಮಾಡುವಂತೆ ಹೇಳಿದ್ದಾರೆ. 
ಅಧಿಕಾರವನ್ನು ಅನುಭವಿಸಲು ನಮಗೆ ಜನತೆ ಮತ ನೀಡಿಲ್ಲ, ಕಠಿಣ ಪರಿಶ್ರಮದ ಮೂಲಕ ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಮತ ನೀಡಿದ್ದಾರೆ ಎಂದು ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾಗಿ ಸಭೆಯಲ್ಲಿ ಭಾಗವಹಿಸಿದ್ದ ಸಂಸದರೊಬ್ಬರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ