ರಾಮ ಸೇತು 
ದೇಶ

"ಹೆಲೆನ್ ಆಫ್ ಟ್ರಾಯ್ ನೈಜ ಎನ್ನುವುದಾದರೆ ರಾಮ ಸೇತು ಯಾಕಾಗಬಾರದು"?

ರಾಮ ಸೇತು ಮಾನವ ನಿರ್ಮಿತವೋ ಅಥವಾ ಸ್ವಾಭಾವಿಕವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಇತಿಹಾಸ ಸಂಶೋಧನೆಯ ಭಾರತೀಯ ಪರಿಷತ್ (ಐಸಿಎಚ್‌ಆರ್) ಹೊಸ ಸಂಶೋಧನಾ ಯೋಜನೆಯನ್ನು ಕೈಗೊಳ್ಳುವುದಾಗಿ ಘೋಷಿಸಿದೆ.

ನವದೆಹಲಿ: ರಾಮ ಸೇತು ಮಾನವ ನಿರ್ಮಿತವೋ ಅಥವಾ ಸ್ವಾಭಾವಿಕವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಇತಿಹಾಸ ಸಂಶೋಧನೆಯ ಭಾರತೀಯ ಪರಿಷತ್ (ಐಸಿಎಚ್‌ಆರ್) ಹೊಸ ಸಂಶೋಧನಾ ಯೋಜನೆಯನ್ನು ಕೈಗೊಳ್ಳುವುದಾಗಿ ಘೋಷಿಸಿದೆ. 
ಅಕ್ಟೊಬರ್-ನವೆಂಬರ್ ತಿಂಗಳಲ್ಲಿ ಯೋಜನೆ ಜಾರಿಗೊಳ್ಳಲಿದ್ದು, ಈ ಬಗ್ಗೆ ಸ್ವತಃ ಐಸಿಹೆಚ್ಆರ್ ನ ಅಧ್ಯಕ್ಷ ವೈ ಸುದರ್ಶನ್ ರಾವ್ ಮಾಹಿತಿ ನೀಡಿದ್ದಾರೆ. ಮಾನವ ಸಂಪನ್ಮೂಲ ಇಲಾಖೆ ವ್ಯಾಪ್ತಿಯಲ್ಲಿ ಬರುವ ಐಸಿಹೆಚ್ಆರ್ ಸಂಸ್ಥೆ ರಾಮ ಸೇತು ಮಾನವ ನಿರ್ಮಿತವೋ ಅಥವಾ ನೈಸರ್ಗಿವಾದದ್ದೋ ಎಂಬುದನ್ನು ಖಚಿತಪಡಿಸಿಕೊಳ್ಳುವುದಕ್ಕೆ ಈ ಯೋಜನೆಯನ್ನು ನಡೆಸುತ್ತಿರುವುದಾಗಿ ಸುದರ್ಶನ್ ರಾವ್ ತಿಳಿಸಿದ್ದಾರೆ. 
ರಾಮೇಶ್ವರಂ ನಿಂದ ಶ್ರೀಲಂಕಾ ವರೆಗಿರುವ ರಾಮ ಸೇತುವಿಗೆ ಸಂಬಂಧಿಸಿದಂತೆ ಈಗಾಗಲೇ ಹಲವು ಸಂಶೋಧನೆಗಳು ನಡೆದಿದ್ದು, ಹಲವು ಭೂರಚನಾ ಶಾಸ್ತ್ರದ ಸಿದ್ಧಾಂತಗಳು ಹಲವು ರೀತಿಯಲ್ಲಿ ರಾಮ ಸೇತು ನಿರ್ಮಾಣ, ರಚನೆಯನ್ನು ವಿಶ್ಲೇಷಿಸಿವೆ.  
ವಿವಿಧ ಸಂಸ್ಥೆಗಳ ಪುರಾತತ್ತ್ವ ಶಾಸ್ತ್ರ ವಿಭಾಗದಿಂದ ಸಂಶೋಧನಾ ವಿದ್ವಾಂಸರನ್ನು ಈ ಯೋಜನೆಯಲ್ಲಿ ಸೇರಿಸಿಕೊಳ್ಳಲಾಗುತ್ತದೆ. ಸಮುದ್ರಕ್ಕೆ ಸಂಬಂಧಿಸಿದ ತರಬೇತಿ ಸಂಸ್ಥೆಗಳ ವಿಜ್ಞಾನಿಗಳ ನೇತೃತ್ವದಲ್ಲಿ ಈ ತಂಡ ಕಾರ್ಯ ನಿರ್ವಹಿಸಲಿದೆ. ಗ್ರೀಕ್  ಪುರಾಣದ "ಹೆಲೆನ್ ಆಫ್ ಟ್ರಾಯ್" ನೈಜವಾದದ್ದು ಎಂದು ಸಾಬೀತಾಗಿದೆ ಎನ್ನುವುದಾದರೆ ರಾಮ ಸೇತು ನೈಜವಾದದ್ದು ಏಕಾಗಬಾರದು ಎಂದು ಸುದರ್ಶನ್ ರಾವ್ ಹೇಳಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT