ಲಾಲೂ ಪ್ರಸಾದ್ ಯಾದವ್ 
ದೇಶ

ಕುಸಿದು ಬಿದ್ದ ವೇದಿಕೆ: ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಗಾಯ

ಧಾರ್ಮಿಕ ಕಾರ್ಯಕ್ರಮವೊಂದರ ವೇದಿಕೆ ಕುಸಿದು ಬಿದ್ದ ಪರಿಣಾಮ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ...

ಪಾಟ್ನ: ಧಾರ್ಮಿಕ ಕಾರ್ಯಕ್ರಮವೊಂದರ ವೇದಿಕೆ ಕುಸಿದು ಬಿದ್ದ ಪರಿಣಾಮ ಆರ್'ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರಿಗೆ ಗಾಯವಾಗಿರುವ ಘಟನೆ ಶನಿವಾರ ನಡೆದಿದೆ. 
ದಿಘಾ ಎಂಬಲ್ಲಿ ನಡೆಯುತ್ತಿದ್ದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ಲಾಲೂ ಪ್ರಸಾದ್ ಯಾದವ್ ಅವರು ಹೋಗಿದ್ದರು. ಲಾಲೂ ಅವರೊಂದಿಗೆ ಅವರ ಪುತ್ರ ಹಾಗೂ ಬಿಹಾರ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ಆರೋಗ್ಯ ಸಚಿವ ತೇಜ್ ಪ್ರತಾಪ್ ಹಾಗೂ ಪುತ್ರಿ ಮಿಶಾ ಭಾರತಿ ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದರು. 
ಯಜ್ಞ ಹಾಗೂ ಪೂಜೆ ನಡೆಯುತ್ತಿದ್ದ ವೇಳೆಯೇ ವೇದಿಕೆ ಇದ್ದಕ್ಕಿದ್ದಂತೆ ಕುಸಿದುಬಿದ್ದಿದೆ. ಪರಿಣಾಮ ಲಾಲೂ ಪ್ರಸಾದ್ ಅವರಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರಿದ್ದ ಕಾರಣ ವೇದಿಕೆ ಕುಸಿದುಬಿದ್ದಿದೆ ಎಂದು ಹೇಳಲಾಗುತ್ತಿದೆ. 
ಕೂಡಲೇ ಲಾಲೂ ಪ್ರಸಾದ್ ಅವರನ್ನು ಐಜಿಐಎಂಎಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಲಾಲೂ ಅವರ ಬೆನ್ನಿಗೆ ಗಾಯವಾಗಿರುವುದಾಗಿ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೌಕಾಪಡೆ ಭದ್ರತೆಯಲ್ಲಿ Hormuz ಜಲಸಂಧಿ ದಾಟಿದ ಭಾರತ ಮೂಲದ LPG tanker!

ಒಂದು ರೂಪಾಯಿಗೆ ಒಂದು ಲೀಟರ್ ಹಾಲು!: ಬಮುಲ್ ಅಧ್ಯಕ್ಷ DK Suresh ಹೇಳಿದ್ದೇನು?

IPL 2026: ಪಂದ್ಯಾವಳಿಗೂ ಮುನ್ನವೇ RCB ಹೀನಾಯ ದಾಖಲೆ ತೋರಿಸಿ ಕೆಣಕಿದ KKR; ಕೆರಳಿದ ಆರ್​ಸಿಬಿ ಅಭಿಮಾನಿಗಳು, Video!

ಮದುವೆ ರದ್ದಾದ ನಂತರ ತನ್ನ ರಕ್ತವನ್ನೇ ಯುವತಿಗೆ ಇಂಜೆಕ್ಟ್ ಮಾಡಿದ HIV ಸೋಂಕಿತ ಯುವಕನ ಬಂಧನ!

ಮುಸ್ಲಿಂ ಯುವತಿಯೊಂದಿಗೆ ಲವ್, ಮದುವೆ ಬೇಡ ಅಂದಿದ್ದಕ್ಕೆ 84 ಬಾರಿ ಇರಿದು ಸಹೋದರಿಯ ಕೊಲೆ: ಅಮ್ಮನಿಗೆ "ಸರ್ಪ್ರೈಸ್" ಎಂದ ಇಂಜಿನಿಯರ್!

SCROLL FOR NEXT