ತೇಜಸ್ವಿ ಯಾದವ್ 
ದೇಶ

ಧೈರ್ಯವಿದ್ದರೆ ಮದ್ಯ ನಿಷೇಧಿಸಿ: ಯೋಗಿ ಆದಿತ್ಯನಾಥ್ ಗೆ ತೇಜಸ್ವಿ ಯಾದವ್ ಸವಾಲು

ಧೈರ್ಯವಿದ್ದರೆ ಉತ್ತರ ಪ್ರದೇಶದಲ್ಲಿ ಮದ್ಯ ನಿಷೇಧಿಸಿ ಮದ್ಯ ನಿಗ್ರಹ ಪಡೆ ರಚಿಸುವಂತೆ ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿ...

ಪಾಟ್ನಾ: ಧೈರ್ಯವಿದ್ದರೆ ಉತ್ತರ ಪ್ರದೇಶದಲ್ಲಿ ಮದ್ಯ ನಿಷೇಧಿಸಿ ಮದ್ಯ ನಿಗ್ರಹ ಪಡೆ ರಚಿಸುವಂತೆ ಉತ್ತರ ಪ್ರದೇಶ ನೂತನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಶನಿವಾರ ಸವಾಲು ಹಾಕಿದ್ದಾರೆ.
ಉತ್ತರ ಪ್ರದೇಶದಲ್ಲಿ ಸದ್ಯ ರೋಮಿಯೊ ನಿಗ್ರಹ ಪಡೆ(anti-Romeo squad) ಭಾರಿ ಸುದ್ದಿ ಮಾಡುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಕಿರಿಯ ಪುತ್ರ ತೇಜಸ್ವಿ ಯಾದವ್, ಮದ್ಯ ಸೇವನೆ ಆರೋಗ್ಯಕ್ಕೆ ಹಾನಿಕರ ಮತ್ತು ಸಮಾಜಕ್ಕೆ ಮಾರಕ. ಜನರನ್ನು ದಾರಿ ತಪ್ಪಿಸುವ ಬದಲು ಮದ್ಯ ನಿಗ್ರಹ ಪಡೆ(anti-liquor squad) ರಚಿಸಲಿ ಎಂದು ಹೇಳಿದ್ದಾರೆ.
ಆದಿತ್ಯನಾಥ್ ಅವರು ನಿಜವಾಗಲೂ ಒಬ್ಬ ಯೋಗಿಯಾಗಿದ್ದರೆ ಮತ್ತು ಪ್ರಾಮಾಣಿಕ ಧಾರ್ಮಿಕ ಸಲಹೆಗಾರರಾಗಿದ್ದರೆ ಮೊದಲು ಉತ್ತರ ಪ್ರದೇಶದಲ್ಲಿ ಸಂಪೂರ್ಣ ಮದ್ಯ ನಿಷೇಧಿಸಲಿ ಎಂದು ಸವಾಲು ಹಾಕಿದ್ದಾರೆ.
ನಿತಿಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಕಳೆದ ವರ್ಷ ಏಪ್ರಿಲ್ ನಿಂದ ರಾಜ್ಯದಲ್ಲಿ ಮದ್ಯವನ್ನು ಸಂಪೂರ್ಣ ನಿಷೇಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT