ಮಾಂಸ ಸಂಸ್ಕರಣ ಘಟಕ ಬಂದ್ (ಸಂಗ್ರಹ ಚಿತ್ರ) 
ದೇಶ

ಉತ್ತರ ಪ್ರದೇಶ: ಕೈರಾನದ ಮಾಂಸ ಸಂಸ್ಕರಣ ಘಟಕ ಬಂದ್

ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ನಂತರ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿಸಲಾಗುತ್ತಿದ್ದು, ಕೈರಾನದಲ್ಲಿರುವ ಅತಿ ಬೃಹತ್ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಲಾಗಿದೆ.

ಮುಜಾಫರ್ ನಗರ: ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳ ನಂತರ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿಸಲಾಗುತ್ತಿದ್ದು, ಕೈರಾನದಲ್ಲಿರುವ ಅತಿ ಬೃಹತ್ ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಲಾಗಿದೆ. 
ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ವಿಜಯ ಪ್ರಕಾಶ್ ನೇತೃತ್ವದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು ತಪಾಸಣೆ ನಡೆಸಿದ ವೇಳೆ ಅಕ್ರಮ ನಡೆಯುತ್ತಿರುವುದು ಪತ್ತೆಯಾಗಿದ್ದು, ಮಾಂಸ ಸಂಸ್ಕರಣ ಘಟಕವನ್ನು ಬಂದ್ ಮಾಡಿದ್ದಾರೆ. ಥಾನಾ ಭವನ್, ಜಲಾಲಬಾದ್ ಶಾಮ್ಲಿಯಲ್ಲಿ ಪರವಾನಗಿ ಇಲ್ಲದೇ ನಡೆಸಲಾಗುತ್ತಿದ್ದ ಮಾಂಸದ ಅಂಗಡಿಗಳನ್ನೂ ಸಹ ಅಧಿಕಾರಿಗಳು ಬಂದ್ ಮಾಡಿಸಿದ್ದಾರೆ. ಇನ್ನು ಮುಜಾಫರ್ ನಗರ ಜಿಲ್ಲೆಗಳಲ್ಲೂ ಹಲವು ಮಾಂಸದ ಅಂಗಡಿಗಳನ್ನು ಬಂದ್ ಮಾಡಿಸಲಾಗಿದೆ. 
ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಉತ್ತರ ಪ್ರದೇಶದಲ್ಲಿ ಅಕ್ರಮ ಕಸಾಯಿಖಾನೆಗಳನ್ನು ತೆರವುಗೊಳಿಸಲಾಗುತ್ತಿದೆ. ಇದರ ಭಾಗವಾಗಿ ಅಕ್ರಮವಾಗಿ ನಡೆಸಲಾಗುತ್ತಿದ್ದ ಸಂಸ್ಕರಣ ಘಟಕವನ್ನೂ ಬಂದ್ ಮಾಡಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT