ಬಿಜೆಪಿ ಶಾಸಕ ವಿಕ್ರಮ್ ಸೈನಿ 
ದೇಶ

ಗೋ ಹತ್ಯೆ ಮಾಡುವವರ ಕೈ, ಕಾಲು ಮುರಿದು ಹಾಕುತ್ತೇನೆ: ಬಿಜೆಪಿ ಶಾಸಕ ವಿಕ್ರಮ್ ಸೈನಿ

ಗೋವುಗಳಿಗೆ ಅಗೌರವ ತೋರುವವರು ಹಾಗೂ ಗೋವುಗಳನ್ನು ಹತ್ಯೆ ಮಾಡುವವರ ಕೈ ಹಾಗೂ ಕಾಲುಗಳನ್ನು ಮುರಿದು ಹಾಕುತ್ತೇನೆಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರು ಭಾನುವಾರ...

ನವದೆಹಲಿ: ಗೋವುಗಳಿಗೆ ಅಗೌರವ ತೋರುವವರು ಹಾಗೂ ಗೋವುಗಳನ್ನು ಹತ್ಯೆ ಮಾಡುವವರ ಕೈ ಹಾಗೂ ಕಾಲುಗಳನ್ನು ಮುರಿದು ಹಾಕುತ್ತೇನೆಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರು ಭಾನುವಾರ ಹೇಳಿದ್ದಾರೆ. 
ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು, ವಂದೇ ಮಾತರಂ ಹಾಗೂ ದೇಶದ ಪರ ಘೋಷಣೆ ಕೂಗುವುದಕ್ಕೆ ನಿರಾಕರಿಸುವವರು, ಗೋವನ್ನು ಮಾತೆಯನ್ನಾಗಿ ಸ್ವೀಕರಿಸದವರು ಹಾಗೂ ಗೋ ಹತ್ಯೆ ಮಾಡುವವರ ಕೈ, ಕಾಲುಗಳನ್ನು ಕತ್ತರಿಸುತ್ತೇವೆ. ಈ ಕುರಿತು ನಾನು ಪ್ರಮಾಣವನ್ನು ಮಾಡುತ್ತೇನೆಂದು ಹೇಳಿದ್ದಾರೆ. 
ಗೋ ರಕ್ಷಣೆಗಾಗಿಯೇ ನಮ್ಮ ತಂಡವೊಂದು ಸದಾಕಾಲ ಸಿದ್ಧವಿದ್ದು, ಭಾರತದ ರಕ್ಷಣೆಗೂ ಸದಾಕಾಲ ಸಿದ್ಧವಿರುತ್ತದೆ. ಪಾಕಿಸ್ತಾನವಾಗಲೀ ಅಥವಾ ಚೀನಾ ದೇಶವಾಗಲಿ ನಮ್ಮ ಮೇಲೆ ಯುದ್ಧಕ್ಕೆ ಬಂದಿದ್ದೇ ಆದರೆ, ನಮ್ಮ ತಂಡದವರು ವೇತನವಿಲ್ಲದೆಯೇ ಗಡಿಯಲ್ಲಿ ನಿಂತು ಯುದ್ಧ ಮಾಡಲು ಸಿದ್ಧರಿದ್ದಾರೆಂದು ತಿಳಿಸಿದ್ದಾರೆ. 
ಸೈನಿಯವರು ಈ ರೀತಿಯ ಹೇಳಿಕೆ ನೀಡುತ್ತಿದ್ದಂತೆಯೇ ಸ್ಥಲದಲ್ಲಿದ್ದ ಜನರು ಚಪ್ಪಾಳೆ ಹೊಡೆಯುವ ಮೂಲಕ ಸೈನಿಯವರಿಗೆ ಬೆಂಬಲ ನೀಡಿದ್ದಾರೆ. ಆದರೆ, ವೇದಿಕೆಯಲ್ಲಿದ್ದ ಕೆಲ ಬಿಜೆಪಿ ಸದಸ್ಯರು ಹೇಳಿಕೆ ನೀಡುತ್ತಿದ್ದ ಸೈನಿಯವರನ್ನು ತಡೆದಿದ್ದಾರೆಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. 
ಸೈನಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದು ಮೊದಲೇನಲ್ಲ. ಮುಜಾಫರ್ ನಗರ ಗಲಭೆ ಸಂದರ್ಭದಲ್ಲಿ ಕೂಡ ಇಂಥಹದ್ದೇ ಅಕ್ಷೇಪಾರ್ಹ ಹೇಳಿಕೆಯೊಂದನ್ನು ನೀಡಿದ್ದರು. ಹೇಳಿಕೆ ಸಂಬಂಧ ಸೈನಿಯವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

SCROLL FOR NEXT