ಬಿಜೆಪಿ ಶಾಸಕ ವಿಕ್ರಮ್ ಸೈನಿ 
ದೇಶ

ಗೋ ಹತ್ಯೆ ಮಾಡುವವರ ಕೈ, ಕಾಲು ಮುರಿದು ಹಾಕುತ್ತೇನೆ: ಬಿಜೆಪಿ ಶಾಸಕ ವಿಕ್ರಮ್ ಸೈನಿ

ಗೋವುಗಳಿಗೆ ಅಗೌರವ ತೋರುವವರು ಹಾಗೂ ಗೋವುಗಳನ್ನು ಹತ್ಯೆ ಮಾಡುವವರ ಕೈ ಹಾಗೂ ಕಾಲುಗಳನ್ನು ಮುರಿದು ಹಾಕುತ್ತೇನೆಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರು ಭಾನುವಾರ...

ನವದೆಹಲಿ: ಗೋವುಗಳಿಗೆ ಅಗೌರವ ತೋರುವವರು ಹಾಗೂ ಗೋವುಗಳನ್ನು ಹತ್ಯೆ ಮಾಡುವವರ ಕೈ ಹಾಗೂ ಕಾಲುಗಳನ್ನು ಮುರಿದು ಹಾಕುತ್ತೇನೆಂದು ಬಿಜೆಪಿ ಶಾಸಕ ವಿಕ್ರಮ್ ಸೈನಿ ಅವರು ಭಾನುವಾರ ಹೇಳಿದ್ದಾರೆ. 
ಖಾಸಗಿ ಸಮಾರಂಭವೊಂದರಲ್ಲಿ ಮಾತನಾಡಿರುವ ಅವರು, ವಂದೇ ಮಾತರಂ ಹಾಗೂ ದೇಶದ ಪರ ಘೋಷಣೆ ಕೂಗುವುದಕ್ಕೆ ನಿರಾಕರಿಸುವವರು, ಗೋವನ್ನು ಮಾತೆಯನ್ನಾಗಿ ಸ್ವೀಕರಿಸದವರು ಹಾಗೂ ಗೋ ಹತ್ಯೆ ಮಾಡುವವರ ಕೈ, ಕಾಲುಗಳನ್ನು ಕತ್ತರಿಸುತ್ತೇವೆ. ಈ ಕುರಿತು ನಾನು ಪ್ರಮಾಣವನ್ನು ಮಾಡುತ್ತೇನೆಂದು ಹೇಳಿದ್ದಾರೆ. 
ಗೋ ರಕ್ಷಣೆಗಾಗಿಯೇ ನಮ್ಮ ತಂಡವೊಂದು ಸದಾಕಾಲ ಸಿದ್ಧವಿದ್ದು, ಭಾರತದ ರಕ್ಷಣೆಗೂ ಸದಾಕಾಲ ಸಿದ್ಧವಿರುತ್ತದೆ. ಪಾಕಿಸ್ತಾನವಾಗಲೀ ಅಥವಾ ಚೀನಾ ದೇಶವಾಗಲಿ ನಮ್ಮ ಮೇಲೆ ಯುದ್ಧಕ್ಕೆ ಬಂದಿದ್ದೇ ಆದರೆ, ನಮ್ಮ ತಂಡದವರು ವೇತನವಿಲ್ಲದೆಯೇ ಗಡಿಯಲ್ಲಿ ನಿಂತು ಯುದ್ಧ ಮಾಡಲು ಸಿದ್ಧರಿದ್ದಾರೆಂದು ತಿಳಿಸಿದ್ದಾರೆ. 
ಸೈನಿಯವರು ಈ ರೀತಿಯ ಹೇಳಿಕೆ ನೀಡುತ್ತಿದ್ದಂತೆಯೇ ಸ್ಥಲದಲ್ಲಿದ್ದ ಜನರು ಚಪ್ಪಾಳೆ ಹೊಡೆಯುವ ಮೂಲಕ ಸೈನಿಯವರಿಗೆ ಬೆಂಬಲ ನೀಡಿದ್ದಾರೆ. ಆದರೆ, ವೇದಿಕೆಯಲ್ಲಿದ್ದ ಕೆಲ ಬಿಜೆಪಿ ಸದಸ್ಯರು ಹೇಳಿಕೆ ನೀಡುತ್ತಿದ್ದ ಸೈನಿಯವರನ್ನು ತಡೆದಿದ್ದಾರೆಂದು ಖಾಸಗಿ ಮಾಧ್ಯಮವೊಂದು ವರದಿ ಮಾಡಿದೆ. 
ಸೈನಿ ವಿವಾದಾತ್ಮಕ ಹೇಳಿಕೆ ನೀಡುತ್ತಿರುವುದು ಇದು ಮೊದಲೇನಲ್ಲ. ಮುಜಾಫರ್ ನಗರ ಗಲಭೆ ಸಂದರ್ಭದಲ್ಲಿ ಕೂಡ ಇಂಥಹದ್ದೇ ಅಕ್ಷೇಪಾರ್ಹ ಹೇಳಿಕೆಯೊಂದನ್ನು ನೀಡಿದ್ದರು. ಹೇಳಿಕೆ ಸಂಬಂಧ ಸೈನಿಯವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT