ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ 
ದೇಶ

ನಾನು ಹುಟ್ಟಿದ್ದು ಕರಾಚಿಯಲ್ಲಿ, ಆದರೆ, ಶಿಕ್ಷಣ, ಶಿಸ್ತು ಕಲಿತಿದ್ದು ಆರ್'ಎಸ್ಎಸ್'ನಿಂದ: ಎಲ್.ಕೆ. ಅಡ್ವಾಣಿ

ನಾನು ಹುಟ್ಟಿದ್ದು ಕರಾಚಿಯಲ್ಲಿ ಆದರೆ, ಶಿಕ್ಷಣ ಪಡೆದಿದ್ದು, ಶಿಸ್ತು ಕಲಿತಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರು ಹೇಳಿದ್ದಾರೆ...

ಮೌಂಟ್ ಅಬು (ರಾಜಸ್ತಾನ): ನಾನು ಹುಟ್ಟಿದ್ದು ಕರಾಚಿಯಲ್ಲಿ ಆದರೆ, ಶಿಕ್ಷಣ ಪಡೆದಿದ್ದು, ಶಿಸ್ತು ಕಲಿತಿದ್ದು ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿಯವರು ಹೇಳಿದ್ದಾರೆ. 
ಬ್ರಹ್ಮ ಕುಮಾರಿ ಸಂಸ್ಥೆಯ 80ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ನಾನು ಕರಾಚಿಯಲ್ಲಿಯೇ ಹುಟ್ಟಿದ್ದೆ. ಆದರೆ, ಶಿಸ್ತು ಮತ್ತು ಶಿಕ್ಷಣವನ್ನು ಪಡೆದುಕೊಂಡಿದ್ದು ಮಾತ್ರ ಆರ್'ಎಸ್ಎಸ್ ನಿಂದ. ಕೆಟ್ಟದ್ದನ್ನು ಎಂದಿಗೂ ಪ್ರಚಾರ ಮಾಡಬಾರೆದೆಂಬುದನ್ನು ಆರ್'ಎಸ್ಎಸ್'ನಿಂದ ಕಲಿತೆ. ದೇಶದ ಕುರಿತ ಭಕ್ತಿ ಹಾಗೂ ಸಮರ್ಪಣೆಯನ್ನು ಆರ್'ಎಸ್ಎಸ್ ನಿಂದ ಕಲಿತೆ ಎಂದು ಹೇಳಿದ್ದಾರೆ. 
ದೇಶದ ಮೂಲೆ ಮೂಲೆಗಳಿಂದ ಸಾವಿರಾರು ಗಣ್ಯರು ಇಂದು ಬ್ರಹ್ಮಕುಮಾರಿಯ 80ನೇ ವರ್ಷಾಚರಣೆ ಕಾರ್ಯಕ್ರಮಕ್ಕೆ ಅಗಮಿಸಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಸ್ಸಾಂ, ಗುಜರಾತ್ ರಾಜ್ಯಗಳ ರಾಜ್ಯಪಾಲರು, ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಹಾಗೂ ಇನ್ನಿತರೆ ಗಣ್ಯಾತಿಗಣ್ಯರು ಹಾಜರಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

SCROLL FOR NEXT