ಸ್ಪೀಕರ್ ಸುಮಿತ್ರಾ ಮಹಾಜನ್ 
ದೇಶ

ಸಂಸದರು ಯಾವಾಗಲೂ ರೈಲಿನಲ್ಲಿ ಪ್ರಯಾಣ ಮಾಡಲು ಆಗಲ್ಲ: ಸ್ಪೀಕರ್ ಸುಮಿತ್ರಾ ಮಹಾಜನ್

ವಿಮಾನಯಾನ ಸಂಸ್ಥೆಗಳು ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ದೇಶಿ ವಿಮಾನ ಪ್ರಮಾಣಕ್ಕೆ ನಿಷೇಧ ಹೇರಿರುವ ಪ್ರಕರಣವನ್ನು ಸೌಹಾರ್ದಯುತವಾಗಿ....

ನವದೆಹಲಿ: ವಿಮಾನಯಾನ ಸಂಸ್ಥೆಗಳು ಶಿವಸೇನಾ ಸಂಸದ ರವೀಂದ್ರ ಗಾಯಕ್ವಾಡ್ ದೇಶಿ ವಿಮಾನ ಪ್ರಮಾಣಕ್ಕೆ ನಿಷೇಧ ಹೇರಿರುವ ಪ್ರಕರಣವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು ಎಂದು ಸೋಮವಾರ ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಅವರು ಹೇಳಿದ್ದಾರೆ.
ಸ್ಪೀಕರ್ ಮಹಾಜನ್ ಅವರು ಗಾಯಕ್ವಾಡ್ ಅವರ ನಿಷೇಧವನ್ನು ಹಿಂಪಡೆಯಬೇಕು ಎಂದು ಪ್ರತ್ಯೇಕವಾಗಿ ಹೇಳಲಿಲ್ಲ. ಆದರೆ ಸಂಸದರು ಸಂಸತ್ ಕಾಲಪಕ್ಕೆ ಹಾಜರಾಗಬೇಕಿರುವುದರಿಂದ ಅವರು ಎಲ್ಲಾ ಸಂದರ್ಭದಲ್ಲೂ ರೈಲಿನಲ್ಲಿ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.
ಸಂಸದರು ಕಲಾಪಕ್ಕೆ ಆಗಮಿಸಬೇಕಾಗಿರುವುದರಿಂದ ಯಾವಾಗ್ಲೂ ರೈಲಿನಲ್ಲಿ ಬರಲು ಆಗುವುದಿಲ್ಲ. ಕೆಲವು ಸಂದರ್ಭದಲ್ಲಿ ವಿಮಾನದ ಮೂಲಕ ಪ್ರಯಾಣ ಮಾಡಬೇಕಾಗುತ್ತದೆ. ಹೀಗಾಗಿ ಈ ಪ್ರಕರಣವನ್ನು ಸೌಹಾರ್ದಯುತವಾಗಿ ಪರಿಹರಿಸಿಕೊಳ್ಳಬೇಕು ಅಂತ ನಾನು ಭಾವಿಸುತ್ತೇನೆ ಎಂದಿದ್ದಾರೆ,
ಈ ಸಂಬಂಧ ನಾನು ಆದೇಶ ಹೊರಡಿಸಲು ಸಾಧ್ಯವಿಲ್ಲ. ಆದರೆ ಪ್ರತಿಭಟನಾ ನಿರತ ಸಂಸದರು ಬಯಸಿದರೆ ಸಮಸ್ಯೆ ಪರಿಹಾರಕ್ಕೆ ನಾನು ಸಹಾಯ ಮಾಡುತ್ತೇನೆ ಎಂದು ಸುಮಿತ್ರಾ ಮಹಾಜನ್ ಅವರು ಹೇಳಿದ್ದಾರೆ.
ಇಂದು ಲೋಕಸಭೆಯಲ್ಲಿ ಗಾಯಕ್ವಾಡ್ ನಿಷೇಧ ಹಿಂಪಡೆಯಬೇಕು ಎಂದು ಒತ್ತಾಯಾಸಿದ ಶಿವಸೇನಾ ಸಂಸದರು, ಈ ಹಿಂದೆ ವಿದೇಶ ಪ್ರಯಾಣದ ವೇಳೆ ವಿಮಾನ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಖ್ಯಾತ ಹಾಸ್ಯ ಕಲಾವಿದ ಕಪಿಲ್ ಶರ್ಮಾ ಅವರಿಗೆ ಏಕೆ ನಿಷೇಧ ಹೇರಲಿಲ್ಲ? ಎಂದು ಸರ್ಕಾರವನ್ನು ಪ್ರಶ್ನಿಸಿದರು.
ಏರ್ ಇಂಡಿಯಾ ವಿಮಾನದ 60 ವರ್ಷದ ಮ್ಯಾನೇಜರ್ ಮೇಲೆ ಹಲ್ಲೆ ನಡೆಸಿದ್ದ ಗಾಯಕ್ವಾಡ್ ಅವರನ್ನು ಭಾರತೀಯ ವಿಮಾನಯಾನ ಸಂಸ್ಥೆಗಳ ಒಕ್ಕೂಟ ನಿಷೇಧ ಪಟ್ಟಿಗೆ ಸೇರಿಸಿದ್ದು, ಇದನ್ನು ಕೇಂದ್ರ ಸರ್ಕಾರ ಸಹ ಬೆಂಬಲಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT