ದೇಶ

ಸಂಸದ ಗಾಯಕ್ ವಾಡ್ ಗೆ ಬೆಂಬಲ: ಉಸ್ಮಾನಾಬಾದ್ ಬಂದ್ ಗೆ ಶಿವಸೇನೆ ಕರೆ

ಏರ್ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಸಂಸದ ರವೀಂದ್ರ ಗಾಯಕ್ ವಾಡ್ ಅವರನ್ನು ಬೆಂಬಲಿಸಿ ಉಸ್ಮಾನಾಬಾದ್ ಬಂದ್ ಗೆ ಶಿವಸೇನೆ ಕರೆ ನೀಡಿದೆ.

ನವದೆಹಲಿ: ಏರ್ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಸಂಸದ ರವೀಂದ್ರ ಗಾಯಕ್ ವಾಡ್ ಅವರನ್ನು ಬೆಂಬಲಿಸಿ ಉಸ್ಮಾನಾಬಾದ್ ಬಂದ್ ಗೆ ಶಿವಸೇನೆ ಕರೆ ನೀಡಿದೆ. 
ಇನ್ನು ವಿಮಾನಯಾನ ಸಂಸ್ಥೆಗಳು ರವೀಂದ್ರ ಗಾಯಕ್ ವಾಡ್ ನ್ನು ಕಪ್ಪು ಪಟ್ಟಿಗೆ ಸೇರಿಸಿರುವುದನ್ನು ಖಂಡಿಸಿ ಶಿವಸೇನೆ ಸಂಸತ್ ನಲ್ಲಿ ನಿಲುವಳಿ ಸೂಚನೆ ಮಂಡಿಸಲು ಸಿದ್ಧತೆ ನಡೆಸಿದೆ. ವಿಮಾನದಲ್ಲಿ ಸೀಟಿನ ವಿಷಯವಾಗಿ ನಡೆದ ಜಗಳದಲ್ಲಿ ಸಂಸದ ರವೀಂದ್ರ ಗಾಯಕ್ ವಾಡ್ ಏರ್ ಇಂಡಿಯಾ ಸಿಬ್ಬಂದಿಗೆ ಚಪ್ಪಲಿಯಲ್ಲಿ ಹೊಡೆದಿದ್ದರು. ಅಷ್ಟೇ ಅಲ್ಲದೇ ತಾವು ತೋರಿದ ದುರ್ವರ್ತನೆಗೆ ಕ್ಷಮೆ ಕೇಳಲೂ ನಿರಾಕರಿಸಿದ್ದರು.  ಈ ಹಿನ್ನೆಲೆಯಲ್ಲಿ ರವೀಂದ್ರ ಗಾಯಕ್ ವಾಡ್ ನಡೆಯನ್ನು ಪ್ರತಿಭಟಿಸಿದ್ದ 6 ಕ್ಕೂ ಹೆಚ್ಚು ವಿಮಾನ ಯಾನ ಸಂಸ್ಥೆಗಳು ಸಂಸದನನ್ನು ಕಪ್ಪು ಪಟ್ಟಿಗೆ ಸೇರಿಸಿದ್ದವು. ಇಷ್ಟೆಲ್ಲಾ ಆದರೂ ಶಿವಸೇನೆ ತನ್ನ ಸಂಸದನ ಪರವಾಗಿ ಮಾತನಾಡುತ್ತಿದ್ದು ಉಸ್ಮಾನಾಬಾದ್ ಲೋಕಸಭಾ ಕ್ಷೇತ್ರದ ಪ್ರತಿನಿಧಿಯಾಗಿರುವ ಸಂಸದ ರವೀಂದ್ರ ಗಾಯಕ್ ವಾಡ್ ನ್ನು ಬೆಂಬಲಿಸಿ ಉಸ್ಮಾನಾಬಾದ್ ಬಂದ್ ಗೆ ಕರೆ ನೀಡಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT