ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ 
ದೇಶ

ಆಧಾರ್ ಕಾರ್ಡು ಮುಖ್ಯ, ಆದರೆ ಕಡ್ಡಾಯವಲ್ಲ: ರವಿಶಂಕರ್ ಪ್ರಸಾದ್

ಬಡವರ ಪರವಾದ ಸರ್ಕಾರದ ಅನೇಕ ಕಾರ್ಯಕ್ರಮಗಳನ್ನು ಆಧಾರ್ ಕಾರ್ಡು ಮೂಲಕ ನೀಡಲು...

ನವದೆಹಲಿ: ಬಡವರ ಪರವಾದ ಸರ್ಕಾರದ ಅನೇಕ ಕಾರ್ಯಕ್ರಮಗಳನ್ನು ಆಧಾರ್ ಕಾರ್ಡು ಮೂಲಕ ನೀಡಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದ್ದು, ಆಧಾರ್ ಕಾರ್ಡು ಹೊಂದಿರುವುದು ಮುಖ್ಯವಾಗಿದ್ದರೂ ಕೂಡ ಸರ್ಕಾರದ ಪ್ರಯೋಜನಗಳನ್ನು ಪಡೆದುಕೊಳ್ಳಲು ಅದು ಕಡ್ಡಾಯವಲ್ಲ ಎಂದು ಕೇಂದ್ರ ಕಾನೂನು ಖಾತೆ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಆಧಾರ್ ಕಾರ್ಡು ಬಗ್ಗೆ ಸುಪ್ರೀಂ ಕೋರ್ಟ್ ನಲ್ಲಿ ಬಾಕಿ ಉಳಿದಿರುವ ವಿಚಾರಣೆ ಬಗ್ಗೆ ಪ್ರತಿಕ್ರಿಯೆ ನೀಡಲು ನಾನು ಬಯಸುವುದಿಲ್ಲ. ಆದರೆ ಬಡವರ ಪರವಾದ ಅನೇಕ ಸರ್ಕಾರಿ ಯೋಜನೆಗಳನ್ನು ಆಧಾರ್ ಮೂಲಕ ನೀಡಲು ಸುಪ್ರೀಂ ಕೋರ್ಟ್ ಅವಕಾಶ ನೀಡಿದೆ. ಆದರೆ ಆಧಾರ್ ಕಡ್ಡಾಯವೇನು ಅಲ್ಲ ಎಂದು ಅವರು ತಿಳಿಸಿದರು.
ಆಧಾರ್ ಸಿಗದಿದ್ದರೆ ಇತರ ಗುರುತು ಪತ್ರಗಳಾದ ವಾಹನ ಚಾಲನಾ ಪರವಾನಗಿ ಪತ್ರ, ರೇಷನ್ ಕಾರ್ಡುಗಳನ್ನು ಕೂಡ ಸರ್ಕಾರಿ ಪ್ರಯೋಜನಕ್ಕೆ ಬಳಸಬಹುದು. ಸಂಸತ್ತಿನಲ್ಲಿ ಅನುಮೋದಿಸಲಾದ ಕಾನೂನಿನಂತೆ ಜನರ ಖಾಸಗಿತನ ಮತ್ತು ಸುರಕ್ಷತೆ ಕಡೆಗೆ ಗಮನ ಹರಿಸುತ್ತೇವೆ ಎಂದರು.
ನಿನ್ನೆ ಪ್ರತಿಕ್ರಿಯೆ ನೀಡಿದ್ದ ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವದೇಕರ್, ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆಗೆ ಆಧಾರ್ ಸಂಖ್ಯೆಯನ್ನು ಬಳಸುವ ಕ್ರಮ ತೆಗೆದುಕೊಳ್ಳಲಾಗಿದೆ. ಅಕ್ರಮವನ್ನು ತಡೆದು ಯೋಜನೆಯಲ್ಲಿ ಪಾರದರ್ಶಕತೆ ತರುವುದು ಇದರ ಉದ್ದೇಶವಾಗಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್ ವಿಜಯ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

ಶಂಕಿತ ದಾಳಿಕೋರ 'ನರಕ ದೇಶ' ಆಫ್ಘಾನಿಸ್ತಾನದಿಂದ ಬಂದವನು, ಇದು ಭಯೋತ್ಪಾದಕ ಕೃತ್ಯ: ನ್ಯಾಷನಲ್ ಗಾರ್ಡ್ ಮೇಲೆ ದಾಳಿಗೆ Donald Trump ತೀವ್ರ ಖಂಡನೆ

450 ಕೋಟಿ ರೂ. ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!

ಇದು ಜೈಲಲ್ಲ, ಮದ್ಯದ ಫ್ಯಾಕ್ಟರಿ: ಕೈದಿಗಳಿಂದ ಮದ್ಯ ತಯಾರಿಕೆ? ಏನಾಗುತ್ತಿದೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ?

SCROLL FOR NEXT