ಅಟ್ಟಾರಿ-ವಾಘಾ ಗಡಿಯಲ್ಲಿನ ತ್ರಿವರ್ಣ ಧ್ವಜ 
ದೇಶ

ಅಟ್ಟಾರಿ-ವಾಘಾ ಗಡಿಯಲ್ಲಿ ತ್ರಿವರ್ಣ ಧ್ವಜ ಬದಲಾವಣೆ: ತನಿಖೆಗೆ ಎಟಿಐ ಆಗ್ರಹ

ಅಟ್ಟಾರಿ-ವಾಘಾ ಗಡಿಯಲ್ಲಿ 350 ಅಡಿ ಎತ್ತರದ ಧ್ವಜಸ್ತಂಭದಲ್ಲಿರುವ ತ್ರಿವರ್ಣ ಧ್ವಜ ಹರಿದಿದ್ದು, ಧ್ವಜ ಬದಲಾವಣೆ ಮಾಡಲಾಗಿದೆ.

ಅಮೃತ್ ಸರ: ಅಟ್ಟಾರಿ-ವಾಘಾ ಗಡಿಯಲ್ಲಿ 350 ಅಡಿ ಎತ್ತರದ ಧ್ವಜಸ್ತಂಭದಲ್ಲಿರುವ ತ್ರಿವರ್ಣ ಧ್ವಜ ಹರಿದಿದ್ದು, ಧ್ವಜ ಬದಲಾವಣೆ ಮಾಡಲಾಗಿದೆ. ಧ್ವಜ ಬದಲಾವಣೆ ಮಾಡಿರುವುದಕ್ಕೆ ಸಂಬಂಧಿಸಿದಂತೆ ತನಿಖೆಗೆ ನಡೆಸಬೇಕೆಂದು ಧ್ವಜಸ್ತಂಭವನ್ನು ನಿರ್ವಹಿಸುವ ಜವಾಬ್ದಾರಿ ಹೊತ್ತಿರುವ ಅಮೃತ್ ಸರ ಅಭಿವೃದ್ಧಿ ಸಂಸ್ಥೆ (ಎಐಟಿ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. 
ಅತಿ ಹೆಚ್ಚು ರಭಸದಲ್ಲಿ ಗಾಳಿ ಬೀಸುವುದರಿಂದ ಧ್ವಜ ಹರಿದಿದ್ದು, ಬದಲಾವಣೆ ಮಾಡಬೇಕಾದ ಅನಿವಾರ್ಯತೆ ಎದುರಾಗಿತ್ತು. ಧ್ವಜಸ್ತಂಭ ನಿರ್ಮಾಣ ಮಾಡಬೇಕಾದರೆ ತಾಂತ್ರಿಕ ಅಂಶಗಳನ್ನು ಪರಿಗಣಿಸಿಲ್ಲ ಎಂಬ ಆರೋಪ ಈಗ ಕೇಳಿಬರುತ್ತಿದ್ದು, ಈ ಬಗ್ಗೆ ತನಿಖೆ ನಡೆಸಬೇಕೆಂದೂ, ಧ್ವಜದ ಗುಣಮಟ್ಟವನ್ನು ಪರಿಶೀಲಿಸಬೇಕೆಂದೂ ಎಐಟಿ ಕೇಂದ್ರ ಸರ್ಕಾರವನ್ನು ಕೋರಿದೆ. 
ಸುಮಾರು 1.25 ಲಕ್ಷ ವೆಚ್ಚದಲ್ಲಿ ಮಾ.5 ರಂದು ಆರೋಹಣವಾಗಿದ್ದ ತ್ರಿವರ್ಣ ಧ್ವಜ ಗಾಳಿಯ ರಭಸಕ್ಕೆ ಸಿಲುಕಿ ಹರಿದಿತ್ತು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಎಐಟಿ ಅಧ್ಯಕ್ಷ ಸುರೇಶ್ ಮಹಾಜನ್ ತಾಂತ್ರಿಕ ಅಂಶಗಳನ್ನು ಪರಿಗಣಿಸದೇ ಯೋಜನೆಯನ್ನು ಆತುರದಲ್ಲಿ ಜಾರಿಗೊಳಿಸಲಾಗಿದೆ. ಇದೊಂದು ಅಪರಾಧವಾಗಿದ್ದು ರಾಷ್ಟ್ರಧ್ವಜ ನಮ್ಮ ದೇಶದ ಹೆಮ್ಮೆಯಾಗಿರುವುದರಿಂದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂದು ಆಗ್ರಹಿಸಿದ್ದಾರೆ. ತಪ್ಪಿತಸ್ಥರಿಗೆ ಶಿಕ್ಷೆಯಾಗುವುದರೊಂದಿಗೆ ಇನ್ನು ಮುಂದಿನ ದಿನಗಳಲ್ಲಿ ರಭಸದ ಗಾಳಿಗೆ ಧ್ವಜ ಹರಿಯದಂತೆ ಎಚ್ಚರಿಕೆ ವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT