ಸಚಿನ್ ಮತ್ತು ರೇಖಾ 
ದೇಶ

ಸಚಿನ್, ರೇಖಾ ಸದನಕ್ಕೆ ಗೈರು; ಆಸಕ್ತಿ ಇಲ್ಲದಿದ್ದರೆ ರಾಜೀನಾಮೆ ಕೊಡಲಿ: ಸಂಸದ ನರೇಶ್ ಅಗರ್ ವಾಲ್

ರಾಜ್ಯಸಭೆಗೆ ನಾಮ ನಿರ್ದೇಶಿತ ಸದಸ್ಯರುಗಳಾದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ಬಾಲಿವುಡ್ ನಟಿ ರೇಖಾ ಅವರ ಸತತ ಗೈರು ಹಾಜರಿ...

ನವದೆಹಲಿ: ರಾಜ್ಯಸಭೆಗೆ ನಾಮ ನಿರ್ದೇಶಿತ ಸದಸ್ಯರುಗಳಾದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಮತ್ತು ಬಾಲಿವುಡ್ ನಟಿ ರೇಖಾ ಅವರ ಸತತ ಗೈರು ಹಾಜರಿ ಸಂಸದ ನರೇಶ್ ಅಗರ್ ವಾಲ್ ಅವರನ್ನು ಕೆರಳಿಸಿದೆ.

ರಾಜ್ಯಸಭೆಗೆ ನಾಮ ನಿರ್ದೇಶಿತವಾಗಿರುವ ಸಚಿನ್ ಮತ್ತು ನಟಿ ರೇಖಾ ಅವರಿಗೆ ಸದನಕ್ಕೆ ಬರಲು ಆಸಕ್ತಿ ಇಲ್ಲವೆಂದಾದರೇ ಅವರಿಬ್ಬರೂ ರಾಜೀನಾಮೆ ನೀಡಬಾರದೇಕೆ ಎಂದು ರಾಜ್ಯಸಭೆ ಉಪ ಸಭಾಪತಿ ಜೆ.ಕುರಿಯನ್ ಅವರನ್ನು ಪ್ರಶ್ನಿಸಿದ್ದಾರೆ.

ನಾಮನಿರ್ದೇಶಿತ ಸದಸ್ಯರು ರಾಜ್ಯಸಭೆಗೆ ಬರುತ್ತಿಲ್ಲ ಎಂದಾದರೆ, ಅವರಿಗೆ ಸದನದಲ್ಲಿ ಭಾಗವಹಿಸಲು ಆಸಕ್ತಿ ಇಲ್ಲ ಎಂಬುದರ ಅರ್ಥವೇ?, ಒಂದು ವೇಳೆ ಅವರಿಗೆ ಸದನದಲ್ಲಿ ಭಾಗವಹಿಸಲು ಆಸಕ್ತಿ ಇಲ್ಲವೆಂದಾದರೆ ಅವರು ರಾಜಿನಾಮೆ ನೀಡಬಾರದೇಕೆ ಎಂದು ಕುಟುಕಿದ್ದಾರೆ.

ಈ ಸಂಬಂಧ ಎಲ್ಲಾ ಸದಸ್ಯರಿಗೂ ಪತ್ರ ಬರೆಯುವುದಾಗಿ ಸಮಾಜವಾದಿ ಪಕ್ಷದ ಸಂಸದ ನರೇಶ್ ಅಗರ್ ವಾಲ್ ಹೇಳಿದ್ದಾರೆ. ರಾಜ್ಯ ಸಭೆಗೆ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿರುವ 12 ಮಂದಿಯನ್ನು ನಾಮ ನಿರ್ದೇಶನ ಮಾಡಲಾಗುತ್ತದೆ.

ಕಲೆ, ವಿಜ್ಞಾನ, ಸಾಹಿತ್ಯ ಕ್ರೀಡೆ, ಸೇರಿದಂತೆ ವಿವಿಧ ಕ್ಷೇತ್ರಗಳ ಸಾಧಕರನ್ನು ನೇಮಕ ಮಾಡಲಾಗುತ್ತದೆ. ಸಚಿನ್ ತೆಂಡೂಲ್ಕರ್ ಮತ್ತು ರೇಖಾ ಸೇರಿದಂತೆ ಅನು ಅಗಾ, ಸಂಭಾಜಿ ಛತ್ರಪತಿ, ಸ್ವಪನ್ ದಾಸ್ ಗುಪ್ತಾ, ರೂಪಾ ಗಂಗೂಲಿ, ನರೇಂದ್ರ ಜಾಧವ್, ಮೇರಿ ಕೋಮ್, ಕೆ. ಪರಾಸರನ್, ಗೋಪಿ ಸುರೇಶ್, ಸುಬ್ರಮಣಿಯನ್ ಸ್ವಾಮಿ ಅವರುಗಳು ರಾಜ್ಯ ಸಭೆಯ ನಾಮ ನಿರ್ದೇಶಿತ ಸದಸ್ಯರಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT