ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ 
ದೇಶ

ಅಯೋಧ್ಯಾ ಭೂ ವಿವಾದ: ತ್ವರಿತ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ಅಯೋಧ್ಯಾ ರಾಮ ಮಂದಿರ-ಬಾಬ್ರಿ ಮಸೀದಿ ವಿವಾದದ ವಿಚಾರಣೆಯನ್ನು ತ್ವರಿತವಾಗಿ ನಡೆಯಲು...

ನವದೆಹಲಿ: ಅಯೋಧ್ಯಾ ರಾಮ ಮಂದಿರ-ಬಾಬ್ರಿ ಮಸೀದಿ ವಿವಾದದ ವಿಚಾರಣೆಯನ್ನು ತ್ವರಿತವಾಗಿ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಇಂದು ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಜೆಎಸ್ ಖೇಹರ್ ಅವರನ್ನೊಳಗೊಂಡ ನ್ಯಾಯಪೀಠ, ಬಿಜೆಪಿ ನಾಯಕ ಸುಬ್ರಹ್ಮಣ್ಯನ್ ಸ್ವಾಮಿ ಅವರು ಈ ವಿವಾದದ ಕಕ್ಷಿಗಾರ ಎಂದು ಪರಿಗಣಿಸುತ್ತದೆ ಎಂದು ಹೇಳಿದೆ.
ಈ ಕೇಸಿನಲ್ಲಿ ನೀವು ಕಕ್ಷಿಗಾರ ಎಂದು ಹೇಳಿಲ್ಲ. ನಮಗೆ ಮಾಧ್ಯಮಗಳಿಂದ ಮಾತ್ರ ಗೊತ್ತಾಯಿತು ಎಂದು ನ್ಯಾಯಾಧೀಶರು ಹೇಳಿದರು. ಅದಕ್ಕೆ ಸುಬ್ರಹ್ಮಣ್ಯನ್ ಸ್ವಾಮಿ, ಪೂಜಿಸುವ ಮೂಲಭೂತ ಹಕ್ಕಿನ ಬಗ್ಗೆ ನಾನು ನ್ಯಾಯಾಲಯದಲ್ಲಿ ಪ್ರಶ್ನಿಸಿದ್ದೇನೆ. ರಾಮ ಮಂದಿರ-ಬಾಬ್ರಿ ಮಸೀದಿ ವಿವಾದ ಕೋರ್ಟ್ ನಲ್ಲಿ ಹಲವು ವರ್ಷಗಳಿಂದ ಇರುವುದರಿಂದ ನನ್ನ ಪ್ರಾರ್ಥನೆ ಸಲ್ಲಿಸುವ ಹಕ್ಕಿನ ಮೇಲೆ ಪರಿಣಾಮ ಬೀರಿದೆ. ಇದಕ್ಕಾಗಿ ನಾನು ಮಧ್ಯಂತರ ಅರ್ಜಿ ಸಲ್ಲಿಸಿದ್ದೇನೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ನ್ಯಾಯಪೀಠ, ವಿಚಾರಣೆಯನ್ನು ತ್ವರಿತವಾಗಿ ಮುಗಿಸಲು ಸಾಧ್ಯವಿಲ್ಲ ಎಂದು ಹೇಳಿತು. ಇದಕ್ಕೂ ಮುನ್ನ ಮೊನ್ನೆ 21ರಂದು ಸುಪ್ರೀಂ ಕೋರ್ಟ್, ಅಯೋಧ್ಯೆಯ ರಾಮ ಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದವನ್ನು ಕೋರ್ಟ್ ಹೊರಗೆ ಇತ್ಯರ್ಥಪಡಿಸುವಂತೆ ಸಲಹೆ ನೀಡಿತ್ತು. ಧಾರ್ಮಿಕತೆ ಮತ್ತು ಭಾವನೆಗಳಿಗೆ ಸಂಬಂಧಪಟ್ಟ ವಿವಾದಗಳನ್ನು ಮಾತುಕತೆ ಮೂಲಕ ಬಗೆಹರಿಸುವುದು ಉತ್ತಮ ಎಂದು ಕೋರ್ಟ್ ಅಭಿಪ್ರಾಯಪಟ್ಟಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT