ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ 
ದೇಶ

ಬಿಜೆಪಿ ನನ್ನ ವಿರುದ್ಧ ಪಿತೂರಿ ನಡೆಸಿದೆ, ನನ್ನ ವಿರುದ್ಧದ ಆರೋಪಗಳು ಪೂರ್ವ ನಿಯೋಜಿತವಾದದ್ದು: ಸಿಎಂ ವೀರಭದ್ರ ಸಿಂಗ್

ನನ್ನ ವಿರುದ್ಧದ ಆರೋಪಗಳು ಪೂರ್ವನಿಯೋಜಿತ ಆರೋಪಗಳಾಗಿದ್ದು, ಬಿಜೆಪಿ ನನ್ನ ವಿರುದ್ಧ ಪಿತೂರಿ ನಡೆಸಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್...

ಹಮಿರ್ಪುರ: ನನ್ನ ವಿರುದ್ಧದ ಆರೋಪಗಳು ಪೂರ್ವನಿಯೋಜಿತ ಆರೋಪಗಳಾಗಿದ್ದು, ಬಿಜೆಪಿ ನನ್ನ ವಿರುದ್ಧ ಪಿತೂರಿ ನಡೆಸಿದೆ ಎಂದು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರು ಶನಿವಾರ ಹೇಳಿದ್ದಾರೆ. 
ಅಕ್ರಮ ಆಸ್ತಿಗಳಿಕೆ ಪ್ರಕರಣ ಸಂಬಂಧ ನಿನ್ನೆಯಷ್ಟೇ ವಿಚಾರಣೆ ನಡೆಸಿದ್ದ ದೆಹಲಿ ಹೈಕೋರ್ಟ್ ಸಿಂಗ್ ವಿರುದ್ದ ವಿಚಾರಣೆ ಹಾಗೂ ಬಂಧನಕ್ಕೆ ತಡೆ ನೀಡಲು ನಿರಾಕರಿಸಿತ್ತು. ಈ ಮೂಲಕ ಸಿಬಿಐ ಆಧಿಕಾರಿಗಳಿಗೆ ಸುಗಮ ಹಾದಿಯನ್ನು ಮಾಡಿಕೊಟ್ಟಿತ್ತು. ಇದರ ಬೆನ್ನಲ್ಲೇ ಸಿಬಿಐ ಅಧಿಕಾರಿಗಳು ಇಂದು ವೀರಭದ್ರ ಸಿಂಗ್ ಹಾಗೂ ಅವರ ಪತ್ನಿ ವಿರುದ್ಧ ಚಾರ್ಜ್ ಶೀಟ್ ದಾಖಲಿಸಿದ್ದರು. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ವೀರಭದ್ರ ಸಿಂಗ್ ಅವರು, ಬಿಜೆಪಿ ಪಕ್ಷ ಹಾಗೂ ನಾಯಕರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೀಗ ಹೋರಾಟ ಆರಂಭವಾಗಿದೆ. ಶೀಘ್ರದಲ್ಲಿಯೇ ಸತ್ಯಾಂಶ ಹೊರಬರಲಿದೆ. ನನ್ನ ವಿರುದ್ಧವಿರುವ ಎಲ್ಲಾ ಆರೋಪಗಳು ಪೂರ್ವನಿಯೋಜಿತವಾದದ್ದು. ಪ್ರೇಮ್ ಕುಮಾರ್ ಮತ್ತು ಅನುರಾಗ್ ಠಾಕೂರ್ ರಂತಹ ಬಿಜೆಪಿ ನಾಯಕರು ನನ್ನ ವಿರುದ್ಧ ಪಿತೂರಿ ನಡೆಸಿದ್ದಾರೆ. ಆರೋಪದಲ್ಲಿ ಯಾವುದೇ ಸತ್ಯಾಂಶಗಳಿಲ್ಲ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT